ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆ ಶನಿವಾರ ನಡೆಯಲಿದೆ.
ಇವರಿಬ್ಬರ ಮಧ್ಯೆ ಹಲವು ತಿಂಗಳಿಂದ ನಡೆದಿದ್ದ ಮುಸುಕಿನ ಗುದ್ದಾಟಕ್ಕೆ ತಾತ್ಕಾಲಿಕವಾಗಿ ತೆರೆ ಬಿದ್ದಿದ್ದು, ಒಗ್ಗಟ್ಟಿನ ಪ್ರದರ್ಶನ ಮತ್ತು ಪಕ್ಷದ ಸಂಘಟನೆಗಾಗಿ ಹಿಂದುಳಿದ ಮೋರ್ಚಾದ ಕಾರ್ಯಕಾರಿಣಿ ಸಭೆ ಕರೆಯಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಪಕ್ಷದ ನಾಯಕರಾದ ಆರ್.ಅಶೋಕ್, ಅರವಿಂದ ಲಿಂಬಾವಳಿ. ಶೋಭಾ ಕರಂದ್ಲಾಜೆ, ಅರುಣ್ಕುಮಾರ್, ಎನ್.ರವಿಕುಮಾರ್ ಮುಂತಾದವರು ಭಾಗವಹಿಸುವರು.