ಬಿಜೆಪಿ ಮತ್ತು ಶಿವಸೇನಾ ನಡುವಿನ ಜಗಳದ ಹಿನ್ನೆಲೆಯಲ್ಲಿ ಪವಾರ್ ಅವರ ಹೇಳಿಕೆ ಪ್ರಾಮುಖ್ಯತೆ ಪಡೆದಿದೆ. ಎರಡು ಪಕ್ಷಗಳ ಮಧ್ಯೆ ಕಳೆದ ಕೆಲವು ದಿನಗಳಿಂದ ಬಿಕ್ಕಟ್ಟು ಹೆಚ್ಚಿದ್ದು ಮೈತ್ರಿ ಸರ್ಕಾರದಲ್ಲಿ ಸಚಿವರಾಗಿರುವ ಶಿವಸೇನಾದ ಅನೇಕರು ರಾಜೀನಾಮೆ ಬೆದರಿಕೆ ಹಾಕಿದ್ದಾರೆ.
ಶಿವಸೇನಾ ತನ್ನ ಮುಖವಾಣಿಯಾದ ‘ಸಾಮ್ನಾ’ ದಲ್ಲಿ ಬಿಜೆಪಿ ಪಕ್ಷ, ಪ್ರಧಾನಿ ಮೋದಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ಮೇಲೆ ನಿರಂತರ ಟೀಕೆ ಮಾಡುತ್ತಿದೆ.