ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎ.ಪದ್ಮನಾಭ,‘ಸಣ್ಣ ಕೈಗಾರಿಕೆಗಳಿಗೆ ನಿವೇಶನಗಳ ಕೊರತೆ ಇದೆ. ಕೈಗಾರಿಕಾ ಪ್ರದೇಶಗಳಲ್ಲಿ ಶೇ 25 ರಷ್ಟು ಜಾಗವನ್ನು ಸಣ್ಣ ಕೈಗಾರಿಕೆಗಳಿಗೆ ಮೀಸಲಿಡಬೇಕು. ಹಾಗೆಯೇ ಪ್ರತ್ಯೇಕ ನಿರ್ದೇಶಾಲಯ ಸ್ಥಾಪಿಸಿ, ಹೊಸ ಸಣ್ಣ ಕೈಗಾರಿಕಾ ನೀತಿ ರಚಿಸಬೇಕು’ ಎಂದು ಒತ್ತಾಯಿಸಿದರು.