ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ‘ನಾವು ಹುಟ್ಟಿದಾಗಿನಿಂದಲೂ ಈ ಸಮಸ್ಯೆ ಎದುರಿಸುತ್ತಿದ್ದೇವೆ. ನಮಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ನಮಗೆ ಪ್ರತ್ಯೇಕವಾದ ಪಡಿತರ ಅಂಗಡಿ, ಕ್ಷೌರದ ಅಂಗಡಿ, ಗಿರಣಿ ಸೌಲಭ್ಯ ಕಲ್ಪಿಸಬೇಕು. ನಮ್ಮ ಓಣಿಯಲ್ಲಿ ಹಲವರು ವಿದ್ಯಾವಂತರಿದ್ದು ಸ್ವಂತ ಉದ್ಯೋಗ ಮಾಡಲು ಆರ್ಥಿಕ ಸಹಾಯ ಒದಗಿಸಬೇಕು’ ಎಂದು ಅಧಿಕಾರಿಗಳನ್ನು ಆಗ್ರಹಿಸಿದರು.