ಬೆಳಗಾವಿ: ‘ಐ.ಟಿ ಅಧಿಕಾರಿಗಳು ದಾಳಿ ನಡೆಸಿದಾಗ ನನ್ನ ಮನೆಯಲ್ಲಿ ₹3.07 ಲಕ್ಷ ನಗದು ಸಿಕ್ಕಿತ್ತು. ಇದಕ್ಕಿಂತ ಒಂದು ರೂಪಾಯಿ ಹೆಚ್ಚು ಸಿಕ್ಕಿರುವುದನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಾಬೀತುಪಡಿಸಿದರೆ ಅವರ ಮನೆಯಲ್ಲಿ ನಾನು ಜೀತದಾಳಾಗುತ್ತೇನೆ’ ಎಂದು ಸಚಿವ ರಮೇಶ ಜಾರಕಿಹೊಳಿ ಸೋಮವಾರ ಇಲ್ಲಿ ಸವಾಲು ಹಾಕಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಯಡಿಯೂರಪ್ಪ ನನ್ನ ವಿರುದ್ಧ ಮಾಡಿರುವ ಆರೋಪವನ್ನು ಸಾಬೀತುಪಡಿಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಅಲ್ಲದೇ, ಜೀವನ ಪರ್ಯಂತ ಅವರ ಮನೆಯಲ್ಲಿ ಆಳಾಗಿ ದುಡಿಯುತ್ತೇನೆ’ ಎಂದರು.