ಮುಸ್ಲಿಮರನ್ನು ಗುರಿಯಾಗಿಸಿ ಈ ಲಸಿಕೆ ನೀಡಲಾಗುತ್ತಿದೆ. ಇದು ತಮ್ಮ ಸಂತತಿಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹೆಣೆದ ತಂತ್ರವಾಗಿದ್ದು, ತಮ್ಮ ಮಕ್ಕಳಿಗೆ ಬೇಡವೇ ಬೇಡ ಎಂದು ಪಟ್ಟು ಹಿಡಿದಿದ್ದರು. ಪುರಸಭೆ ಅಧ್ಯಕ್ಷ ಸಾದಿಕ್ ಮಟ್ಟಾ, ತಂಝೀಮ್ ಉಪಾಧ್ಯಕ್ಷ ಇನಾಯತ್ ಉಲ್ಲಾ ಶಾಬಂದ್ರಿ, ಪ್ರಮುಖರಾದ ಇಮ್ತಿಯಾಜ್ ಉದ್ಯಾವರ್, ನಿಸಾರ್ ಅಹಮ್ಮದ್ ರುಕ್ನುದ್ದೀನ್ ಅವರು ಪಾಲಕರ ಮನವೊಲಿಸಲು ಮಾಡಿದ ಪ್ರಯತ್ನವೂ ವ್ಯರ್ಥವಾದಾಗ ಮಧ್ಯಾಹ್ನದ ವೇಳೆಗೆ ಲಸಿಕೆ ಹಾಕುವುದನ್ನು ಸ್ಥಗಿತಗೊಳಿಸಲಾಗಿತ್ತು. ಇದೇ ಕಾರಣದಿಂದ ಸೋಮವಾರ ಕೂಡ ಲಸಿಕಾ ಕಾರ್ಯಕ್ರಮ ನಡೆಯಲಿಲ್ಲ.