ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಕ್ಷ್ಯಾಧಾರ ಕೊರತೆ: ಪ್ರೇಮಲತಾ ದಂಪತಿಗೆ ಕ್ಲೀನ್‌ಚಿಟ್‌

ರಾಘವೇಶ್ವರ ಸ್ವಾಮೀಜಿಗೆ ಬ್ಲ್ಯಾಕ್‌ಮೇಲ್ ಪ್ರಕರಣ, ಬಿ– ರಿಪೋರ್ಟ್ ಸಲ್ಲಿಕೆ
Last Updated 22 ಫೆಬ್ರುವರಿ 2017, 19:44 IST
ಅಕ್ಷರ ಗಾತ್ರ

ಹೊನ್ನಾವರ (ಉತ್ತರ ಕನ್ನಡ):  ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರಿಗೆ ಬ್ಲ್ಯಾಕ್‌ಮೇಲ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿಐಡಿ ಪೊಲೀಸರು, ಬುಧವಾರ ಇಲ್ಲಿನ  ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ‘ಬಿ’ ರಿಪೋರ್ಟ್‌ (ಆರೋಪ ಸಾಬೀತಾಗಿಲ್ಲ) ಸಲ್ಲಿಸಿದ್ದಾರೆ.    

‘ಸ್ವಾಮೀಜಿ ಅವರಿಗೆ ₹ 3 ಕೋಟಿ ನೀಡುವಂತೆ ಬೇಡಿಕೆ ಇಟ್ಟು ಬೆಂಗಳೂರಿನ ದಿವಾಕರ ಶಾಸ್ತ್ರಿ, ಅವರ ಪತ್ನಿ ಪ್ರೇಮಲತಾ ಶಾಸ್ತ್ರಿ ಹಾಗೂ ಸೋದರ ನಾರಾಯಣ ಶಾಸ್ತ್ರಿ ಅವರು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾರೆ’ ಎಂದು ತಾಲ್ಲೂಕಿನ ಹಳದೀಪುರದ ಬಿ.ಆರ್‌. ಚಂದ್ರಶೇಖರ ಎಂಬುವವರು 2014 ಆಗಸ್ಟ್‌ 17ರಂದು ಪೊಲೀಸರಿಗೆ ದೂರು ನೀಡಿದ್ದರು.

ದೂರು ಆಧರಿಸಿ, ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು. ಆರೋಪಿಗಳ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಸಿಐಡಿ ತನಿಖಾ ತಂಡವು ಬಿ–ರಿಪೋರ್ಟ್ ಸಲ್ಲಿಸಿದೆ. ಇದರ ವಿರುದ್ಧ ದೂರುದಾರರು ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಡಿವೈಎಸ್‌ಪಿ ಮಲ್ಲೇಶ ನೇತೃತ್ವದಲ್ಲಿ ಸಿಐಡಿ ತಂಡ ಪ್ರಕರಣದ ತನಿಖೆ ಕೈಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT