ದೂರು ಆಧರಿಸಿ, ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು. ಆರೋಪಿಗಳ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳು ಇಲ್ಲದ ಕಾರಣ ಸಿಐಡಿ ತನಿಖಾ ತಂಡವು ಬಿ–ರಿಪೋರ್ಟ್ ಸಲ್ಲಿಸಿದೆ. ಇದರ ವಿರುದ್ಧ ದೂರುದಾರರು ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಡಿವೈಎಸ್ಪಿ ಮಲ್ಲೇಶ ನೇತೃತ್ವದಲ್ಲಿ ಸಿಐಡಿ ತಂಡ ಪ್ರಕರಣದ ತನಿಖೆ ಕೈಗೊಂಡಿತ್ತು.