ಕೋಝಿಕ್ಕೋಡ್: ನಾಳೆ ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯುವ ಸೌಹಾರ್ದತಾ ರ್ಯಾಲಿಯಲ್ಲಿ ಖಂಡಿತಾ ಭಾಗವಹಿಸುತ್ತೇನೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಇಂದು ಸುದ್ದಿಗಾರರೊಡನೆ ಮಾತನಾಡಿದ ಅವರು ಅಲ್ಲಿಗೆ ಹೋಗಿ ಬಂದ ನಂತರ ಆರ್ಎಸ್ಎಸ್ನ ಪ್ರತಿಭಟನೆಗೆ ಉತ್ತರ ನೀಡುತ್ತೇನೆ ಎಂದಿದ್ದಾರೆ.
ಮಂಗಳೂರಿನಲ್ಲಿ ಪಿಣರಾಯಿ ವಿಜಯನ್ ಭೇಟಿ ವಿರುದ್ಧ ಪ್ರತಿಭಟನೆಗಳು ತೀವ್ರವಾಗಿದ್ದು, ಕೇರಳದ ಮುಖ್ಯಮಂತ್ರಿಯ ಸುರಕ್ಷೆಗಾಗಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ.
ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ತಡೆಯಲು 400 ಪೊಲೀಸರನ್ನು ನಿಯೋಜಿಸಲಾಗಿದೆ.
[related]
ಹಿಂದೂ ವಿರೋಧಿ ಪಿಣರಾಯಿ ಗೋ ಬ್ಯಾಕ್ : ಪಿಣರಾಯಿ ಭಾಷಣ ಮಾಡುವುದನ್ನು ಪ್ರತಿಭಟಿಸಿ ಇಂದು ಮಂಗಳೂರಿನಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಿಂದೂ ವಿರೋಧಿ ಪಿಣರಾಯಿ ಗೋ ಬ್ಯಾಕ್ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.