ಶ್ರೀಲಂಕಾದ ವಾಯವ್ಯ ಭಾಗದಲ್ಲಿರುವ ಕಲುತರ ಜೈಲಿನಿಂದ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಖೈದಿಗಳನ್ನು ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಆಗಂತುಕರು ಬಸ್ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.
ಕಲುತರ ಜಂಕ್ಷನ್ನಿನ ನಗಹ ವೃತ್ತದಲ್ಲಿ ಈ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಕುಖ್ಯಾತ ಭೂಗತ ಪಾತಕಿ ಅರುಣಾ ಉದಯಂಗಾ ಅಲಿಯಾಸ್ ಸಮಯನ್ ಹಾಗೂ ಆತನ ಇಬ್ಬರು ಸಹಚರರ ಸಹಿತ ಒಟ್ಟು ಏಳು ಜನ ಮೃತಪಟ್ಟಿದ್ದಾರೆ.
ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು, ನಾಲ್ವರು ಖೈದಿಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.