ಮಹಾಮಂಗಳಾರತಿ ಹಾಗೂ ವಿಶೇಷ ಪೂಜೆಯ ನಂತರ ಬೆಳಿಗ್ಗೆ 10 ಗಂಟೆಗೆ ಸಾಲೂರು ಬೃಹನ್ಮಠದ ಇಮ್ಮಡಿ ಗುರುಸ್ವಾಮಿ ರಥೋತ್ಸವಕ್ಕೆ ಚಾಲನೆ ನೀಡಿದರು. ಒಂದು ಗಂಟೆಗೂ ಹೆಚ್ಚು ಕಾಲ ದೇವಾಲಯದ ಸುತ್ತಲೂ ರಥೋತ್ಸವ ಪ್ರದಕ್ಷಿಣೆ ನಡೆಯಿತು. ಮೆರವಣಿಗೆಯುದ್ದಕ್ಕೂ ಭಕ್ತರು ಹಣ್ಣು ಜವನ, ತಾವು ಬೆಳೆದು ಮೀಸಲಿಟ್ಟಿದ್ದ ದವಸ– ಧಾನ್ಯ, ನಗನಾಣ್ಯಗಳನ್ನು ರಥಕ್ಕೆ ಎಸೆದು ತಮ್ಮ ಹರಕೆ, ಕಾಣಿಕೆ ಸಲ್ಲಿಸಿದರು.