ನವದೆಹಲಿ: ಶ್ರೀರಾಮ ಮಹಿಳಾ ಕಾಲೇಜಿನ ವಿದ್ಯಾರ್ಥಿ ಗುರ್ಮೆಹರ್ ಅವರು, ರಾಮ್ಜಾಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ ಸಂಭವಿಸಿದ ನಂತರ ‘ನಾನು ಎಬಿವಿಪಿಗೆ ಹೆದರುವುದಿಲ್ಲ’ ಎಂಬ ಅಭಿಯಾನ ಆರಂಭಿಸಿದ್ದರು. ಇದಕ್ಕೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಬೆಂಬಲ ವ್ಯಕ್ತವಾಗಿತ್ತು. ಅಷ್ಟೇ ಅಲ್ಲದೆ ‘ನನ್ನ ತಂದೆಯನ್ನು ಕೊಲೆ ಮಾಡಿದ್ದು ಪಾಕಿಸ್ತಾನವಲ್ಲ, ಯುದ್ಧ’ ಎಂದು ಗುರ್ಮೆಹರ್ ಹೇಳಿದ್ದು ವಿವಾದ ಸೃಷ್ಟಿಯಾಗಿತ್ತು.