‘ಈ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ, ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಡಾಂಬರೀಕರಣ ಆಗದ ರಸ್ತೆಗಳನ್ನು ಕೂಡಲೇ ಅಭಿವೃದ್ಧಿಗೊಳಿಸಲಾಗುವುದು’ ಎಂದರು. ಮೇಯರ್ ಜಿ.ಪದ್ಮಾವತಿ ಮಾತನಾಡಿ, ‘ಬೆಂಗಳೂರು ಒನ್ ಕೇಂದ್ರ ಪ್ರಾರಂಭವಾಗಿರುವುದು ಈ ಭಾಗದ ಜನರಿಗೆ ಸಹಕಾರಿಯಾಗಿದೆ’ ಎಂದು ಹೇಳಿದರು.