ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಕೇಂದ್ರದ ಬಿಜೆಪಿ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಆಗಲಿಲ್ಲ. ಕೇಂದ್ರದಿಂದ ₹ 1 ಕೋಟಿ ಉದ್ಯೋಗ ಸೃಷ್ಟಿಯಾಗಲಿಲ್ಲ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಎಂ.ಬಿ.ಸೌದಗರ ಬಿಜೆಪಿ ಸರ್ಕಾರವನ್ನು ಟೀಕಿಸಿದರು.
ನೋಟು ರದ್ದುಗೊಂಡಿದ್ದರಿಂದ ಸಾಮಾನ್ಯ ಜನರಿಗೆ ತೊಂದರೆಯಾಗಿದೆ. ಭಾರತ ದೇಶಕ್ಕೆ ಒಳ್ಳೆಯ ದಿನಗಳು ಬಂದವೇ ಎಂದು ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಪ್ರಶ್ನಿಸಿದರು.
ಭೀಮಸೇನ ಚಿಮ್ಮನಕಟ್ಟಿ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರಾದ ಡಾ.ಎಂ.ಜಿ.ಕಿತ್ತಲಿ, ಎಫ್.ಆರ್.ಪಾಟೀಲ, ಸುವರ್ಣ ಬ್ಯಾಹಟ್ಟಿ, ಪ್ರಕಾಶ ಮೇಟಿ, ಮುತ್ತಣ್ಣ ಯರಗೊಪ್ಪ, ಡಿ.ಆರ್.ಪೂಜಾರ, ಯಮನಪ್ಪ ದೇವಮಾಳಿ ಮಾತನಾಡಿದರು. ಪುರಸಭೆ ಅಧ್ಯಕ್ಷ ಫಾರೂಕ್ ಅಹ್ಮದ್ ದೊಡಮನಿ, ಪಾಂಡಪ್ಪ ಈಳಗೇರ, ಐ.ಎಸ್. ಕರಿಗೌಡರ, ಬಿ.ಬಿ.ಸೂಳಿಕೇರಿ ಮೊದಲಾದವರಿದ್ದರು. ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಎಂ.ಡಿ.ಯಲಿಗಾರ ಪ್ರಾಸ್ತಾವಿಕವಾಗಿ ಮಾತನಾಡಿದರು.