ಬಳ್ಳಾರಿ: ದೇಶಕ್ಕೆ ಸ್ವಾತಂತ್ರ್ಯ ದೊರೆತು ಹಲವು ದಶಕಗಳಾದರೂ ಜನರನ್ನು ಕಾಡುತ್ತಿರುವ ಜಾತೀಯತೆ ಮತ್ತು ಅಸಮಾನತೆಯನ್ನು ತೊಲಗಿಸಲು ಯುವ ಜನರು ಪಣತೊಡಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಸಲಹೆ ನೀಡಿದರು.
ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ‘ರಾಷ್ಟ್ರಾಭಿ ವೃದ್ಧಿ ಮತ್ತು ಯುವ ಜನತೆಯ ವ್ಯಕ್ತಿತ್ವ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ’ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆ ಸಿದ ಅವರು, ಸಾಮಾಜಿಕ ಅನಿಷ್ಠಗಳ ಜೊತೆಗೆ ಈಗ ಶಿಕ್ಷಣದ ವ್ಯಾಪಾರೀಕರ ಣವೂ ಭೀಕರವಾಗಿ ನಡೆದಿದೆ. ಬಹು ತೇಕ ಶಾಸಕರು ಹಾಗೂ ಸಚಿವರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳು ರಾಜಕೀಯ ವ್ಯಕ್ತಿಗಳ ಒಡೆತನದಲ್ಲಿರು ವುದರಿಂದ ಯಾವುದೇ ಸರ್ಕಾರ ಅವ ರನ್ನು ಏನೂ ಮಾಡಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಷಾದಿಸಿದರು.
ಲಂಚ ಪಡೆಯುವುದಿಲ್ಲ ಮತ್ತು ಲಂಚ ಕೊಡೋದಿಲ್ಲ ಎಂದು ಯುವಜನ ಶಪಥ ಮಾಡಬೇಕು. ಆಗ ಮಾತ್ರ ಭವಿಷ್ಯದಲ್ಲಿ ಭ್ರಷ್ಟಾಚಾರ ಮುಕ್ತ ದೇಶ ಕಟ್ಟಲು ಸಾಧ್ಯ ಎಂದು ಪ್ರತಿಪಾದಿಸಿದರು.