ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶುಕುಮಾರ್‌ಗೆ ಪ್ರಶಸ್ತಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ
Last Updated 4 ಮಾರ್ಚ್ 2017, 20:11 IST
ಅಕ್ಷರ ಗಾತ್ರ
ಬೆಂಗಳೂರು: ವಾರ್ತಾ  ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್.ಆರ್.ವಿಶುಕುಮಾರ್ ಅವರಿಗೆ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ನೀಡುವ ಅತ್ಯುತ್ತಮ ಸಂವಹನಕಾರ (ಸರ್ಕಾರಿ ಸಂಸ್ಥೆ) ಪ್ರಶಸ್ತಿ ದೊರೆತಿದೆ.
 
ನಗರದಲ್ಲಿ ಶನಿವಾರ ನಡೆದ 11ನೇ ಜಾಗತಿಕ ಸಂವಹನ ಸಮ್ಮೇಳನದಲ್ಲಿ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶಸ್ತಿ ಪ್ರದಾನ ಮಾಡಿದರು.
 
ವಾರ್ತಾ ಇಲಾಖೆಯ ಪ್ರಕಟಣಾ ವಿಭಾಗಕ್ಕೆ ಒಟ್ಟು ಮೂರು ಪ್ರಶಸ್ತಿಗಳು ಲಭಿಸಿವೆ. ಇಲಾಖೆ ಹೊರತಂದಿರುವ ಗಾಂಧೀಜಿ ಕುರಿತ ಪುಸ್ತಕಕ್ಕೆ ಅತ್ಯುತ್ತಮ ಪ್ರಕಟಣೆ ಪ್ರಶಸ್ತಿ ಲಭಿಸಿದೆ.  ಇಲಾಖೆಯ ಉಪ ನಿರ್ದೇಶಕರಾದ ಬಸವರಾಜ ಕಂಬಿ ಮತ್ತು ಎಚ್.ಬಿ. ದಿನೇಶ್  ಪ್ರಶಸ್ತಿ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT