ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪುರುಷರಷ್ಟೇ ಮಹಿಳೆಯರೂ ಸಮರ್ಥರು. ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿರುವ ಮಹಿಳೆಯರು ನಮ್ಮ ನಡುವೆ ಸಾಕಷ್ಟಿದ್ದಾರೆ. ಕ್ರೀಡೆಯಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸಿದವರೂ ಇದ್ದಾರೆ. ಹಾಗಾಗಿ, ಲಿಂಗ ತಾರತಮ್ಯ ಬಿಟ್ಟು ಮಹಿಳೆಯರಿಗೂ ಅವಕಾಶಗಳನ್ನು ಕಲ್ಪಿಸಿಕೊಡಬೇಕು ಎಂದು ಅವರು ಹೇಳಿದರು.
ಮಹಿಳಾ ಘಟಕದ ಸಂಚಾಲಕಿ ಮುನಿರಾ ಮಾತನಾಡಿದರು. ಪಟ್ಟಣದ ಮಹಿಳಾ ಸಾಂತ್ವನ ಕೇಂದ್ರದ ಅಧ್ಯಕ್ಷೆ ಶೀಲಾ ನಂಜುಂಡಯ್ಯ ಮತ್ತು ಯೂರೋಪಿಯನ್ನರ ಸ್ಮಶಾನ ಕಾಯುತ್ತಿರುವ ವಿದ್ಯಾಲಕ್ಷ್ಮಿ ಅವರನ್ನು ಸನ್ಮಾನಿಸಲಾಯಿತು.
ಆಡಂಬರದ ವ್ಯಾಮೋಹಕ್ಕೆ ಜೀವನ ಹಾಳು
ಮಂಡ್ಯ: ಜಾಹೀರಾತು ಹಾಗೂ ಧಾರಾವಾಹಿಗಳಲ್ಲಿ ಬರುವ ಆಡಂಬರದ ಜೀವನ ವ್ಯಾಮೋಹಕ್ಕೆ ಮನಸೋತು ಹೆಣ್ಣು ಮಕ್ಕಳು ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಕವಿಯತ್ರಿ ಬಿ.ಎಸ್. ಮೀನಾಕ್ಷಿ ಆತಂಕ ವ್ಯಕ್ತಪಡಿಸಿದರು.
ನಗರದ ಗಾಂಧಿ ಭವನದಲ್ಲಿ ನೆಹರೂ ಯುವ ಕೇಂದ್ರ, ವಿಬ್ಸಿಟಿ, ಮಹಾತ್ಮಗಾಂಧಿ ಸ್ಮಾರಕ ಟ್ರಸ್ಟ್, ಕೌಶಲ್ಯ ಯುವತಿ ಮತ್ತು ಮಹಿಳಾ ಮಂಡಳಿ ವತಿಯಿಂದ ‘ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ’ ಅಂಗವಾಗಿ ಬುಧವಾರ ನಡೆದ ‘ಮಂಡ್ಯ ಜಿಲ್ಲಾ ಸಾಂಸ್ಕೃತಿಕ ಹಬ್ಬ’ ಉದ್ಘಾಟಿಸಿ ಅವರು ಮಾತನಾಡಿದರು.
ಮರ್ಯಾದಾ ಹತ್ಯೆ, ಹೆಣ್ಣಿನ ಮೇಲೆ ವಿವಿಧ ಶೋಷಣೆಗಳು ಹೆಚ್ಚುತ್ತಲೇ ಇವೆ. ಇದರ ವಿರುದ್ಧ ಸಂಘಟಿತರಾಗಬೇಕು ಎಂದು ಸಲಹೆ ನೀಡಿದರು. ವಿಬ್ಸಿಟಿ ನಿರ್ದೇಶಕ ಕೆ.ಎಸ್. ಬಸವರಾಜು, ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಎಸ್. ಸಿದ್ದರಾಮಪ್ಪ, ವಿಶ್ರಾಂತ ಪ್ರಾಂಶುಪಾಲ ಅರ್ಜುನಪುರಿ ಅಪ್ಪಾಜಿಗೌಡ ಮತ್ತಿತರರು ಉಪಸ್ಥಿತರಿದ್ದರು.
* ಶಿಕ್ಷಣ ಕಲಿತ ಹೆಣ್ಣೊಂದು ಮನೆಯಲ್ಲಿದ್ದರೆ, ಆ ಮನೆ ವಿದ್ಯಾವಂತರ ಬೀಡಾಗುತ್ತದೆ. ಹಿಂದಿನ ಕಾಲಕ್ಕೆ ಹೋಲಿಸಿದರೆ ಪ್ರಸ್ತುತದಲ್ಲಿ ಶಿಕ್ಷಣ ಪಡೆಯುವವರ ಸಂಖ್ಯೆ ಹೆಚ್ಚಾಗುತ್ತದೆ. ಹೆಣ್ಣಿಗೆ ಗೌರವ ಕೊಡುವ ಮನೋಭಾವ ಬೆಳೆಸಿಕೊಳ್ಳಬೇಕು
ನಾಗರಾಜು, ವಲಯ ಕೃಷಿ ಸಂಶೋಧನಾ ಕೇಂದ್ರದ ಪ್ರಭಾರ ನಿರ್ದೇಶಕ
ದೌರ್ಜನ್ಯ ಹತ್ತಿಕ್ಕಲು ಸಂಘಟಿತರಾಗಿ
ಮದ್ದೂರು: ಮಹಿಳೆಯರು ತಮ್ಮ ಮೇಲಿನ ದೌರ್ಜನ್ಯಗಳನ್ನು ಹತ್ತಿಕ್ಕಲು ಸಂಘಟಿತರಾಗಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಪಿ.ಗೌಡ ಹೇಳಿದರು.
ತಾಲ್ಲೂಕು ಕಾನೂನು ಸೇವಗಳ ಸಮಿತಿ, ವಕೀಲರ ಸಂಘ, ಅಬಕಾರಿ ಇಲಾಖೆ ಸಹಯೋಗದಲ್ಲಿ ಬುಧವಾರ ಇಲ್ಲಿನ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಬುಧವಾರ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಂಶುಪಾಲ ಎಚ್. ಕೃಷ್ಣೇಗೌಡ ಅಧ್ಯಕ್ಷತೆ ವಹಿಸಿದ್ದರು. ಬಿ.ಎಸ್.ದಿವ್ಯಾ, ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ವರದರಾಜು ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು.
ಪುರಸಭೆ ಪರಿಸರ ಎಂಜಿನಿಯರ್ ಎಸ್.ಮೀನಾಕ್ಷಿ ಪುರಸಭೆ, ಪ್ರಾಧ್ಯಾಪಕ ಪ್ರೊ.ಚಂದ್ರಪ್ಪ, ಪ್ರೊ.ಎಸ್.ಪಿ. ಪ್ರಸಾದ್, ಸಹಾಯಕ ಸರ್ಕಾರಿ ಅಭಿಯೋಜಕಿ ಜಿ.ವೆಂಕಟಲಕ್ಷ್ಮಿ, ವಕೀಲರಾದ ಮಹೇಶ್, ಎಚ್.ಪಿ.ನಾಗೇಶ್ ಇದ್ದರು.
ಆರೋಗ್ಯದ ಕಾಳಜಿ ವಹಿಸಿ
ಮದ್ದೂರು: ಮಹಿಳೆಯರು ತಮ್ಮ ಆರೋಗ್ಯದ ಬಗೆಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯೆ ಡಾ.ಪೃಥ್ವಿ ಪ್ರಿಯದರ್ಶಿನಿ ಸಲಹೆ ನೀಡಿದರು.
ಪಟ್ಟಣದಲ್ಲಿ ಇನ್ನರ್ ವ್ಹೀಲ್ ಸಂಸ್ಥೆ ವತಿಯಿಂದ ಬುಧವಾರ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಲಲನಾ ಅಪ್ಪಾಜಿಗೌಡ, ಭಾಗ್ಯಾ, ಮಂಗಳಾ ಸಿದ್ದರಾಜು, ಕನ್ನಗಿ ಶ್ರೀನಿವಾಸ್, ರಶ್ಮಿ, ಸೌಮ್ಯಾ, ಪದ್ಮಶ್ರೀ, ಹರ್ಷಿತಾ, ಧನಲಕ್ಷ್ಮಿ, ಪದ್ಮಾ, ಜಯಶ್ರೀ, ವಿಜಯಾ ಮಲ್ಲಕಾರ್ಜುನ, ಕಲಾವತಿ, ಜಯಾ ರಮೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.