ಬೆಂಗಳೂರಿನಲ್ಲಿ ಒಳಚರಂಡಿ ಮತ್ತು ಇಳಿಗುಂಡಿಗೆ (ಮ್ಯಾನ್ಹೋಲ್) ಇಳಿದ ಮೂವರು ಕಾರ್ಮಿಕರು ಮೃತಪಟ್ಟಿರುವುದು ಅತ್ಯಂತ ದುಃಖದಾಯಕ ಸಂಗತಿ. ಒಳಚರಂಡಿಯನ್ನು ಮನುಷ್ಯರಿಂದ ಸ್ವಚ್ಛಗೊಳಿಸುವುದು ಅಪರಾಧ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಿದ್ದರೂ ಗುತ್ತಿಗೆದಾರರು ಹೆಚ್ಚಿನ ಹಣದ ಆಮಿಷ ಒಡ್ಡಿ ಕಾರ್ಮಿಕರನ್ನು ಇಂತಹ ಅಪಾಯಕಾರಿ ಕೆಲಸಗಳಿಗೆ ಬಳಸಿಕೊಳ್ಳುತ್ತಾರೆ.