ಸಚಿವರು ರಾಜ್ಯದಲ್ಲಿ ಪ್ರವಾಸ ಕೈಗೊಂಡು ರೈತರ ನೆರವಿಗೆ ಧಾವಿಸಬೇಕಿತ್ತು. ಆದರೆ ಅವರು ಬೆಂಗಳೂರಿನಲ್ಲಿ ಕುಳಿತು ಕೇಂದ್ರ ಸರ್ಕಾರದ ದೂಷಣೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ ಎಂದು ಹೇಳಿದರು.
ಕೂಡಲೇ ರೈತರ ಸಾಲ ಮನ್ನಾ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವ ಕಡೆ ಟ್ಯಾಂಕರುಗಳಿಂದ ನೀರನ್ನು ಒದಗಿಸಬೇಕು. ರೈತರಲ್ಲಿ ಆತ್ಮವಿಶ್ವಾಸ ತುಂಬಲು ಜಿಲ್ಲಾ ಉಸ್ತುವಾರಿ ಸಚಿವರು ತಾಲ್ಲೂಕು ಹಾಗೂ ಜಿಲ್ಲೆಗಳಲ್ಲಿ ರೈತರನ್ನು ಭೇಟಿ ಮಾಡಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಸದಸ್ಯರು ತಹಶೀಲ್ದಾರ್ ಅಜಿತ್ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದರು.
ಬಿಜೆಪಿ ಸದಸ್ಯರಾದ ಮುನಿರಾಜು, ಶ್ರೀರಾಮರೆಡ್ಡಿ, ಸುರೇಂದ್ರಗೌಡ, ಸುಜಾತಮ್ಮ, ಮಂಜುಳಮ್ಮ, ದಾಮೋದರ್, ಬೈರರೆಡ್ಡಿ, ದೊಣ್ಣಹಳ್ಳಿ ರಾಮಣ್ಣ, ಕೆಂಪರೆಡ್ಡಿ, ರತ್ನಮ್ಮ, ಅಶ್ವಖ್ ಅಹ್ಮದ್, ನಯಾಜ್ ಅಹಮದ್ ಹಾಜರಿದ್ದರು.