ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ವಿಶ್ವಾಸಮತ ಯಾಚಿಸಲು ಫೆಬ್ರುವರಿ 18ರಂದು ವಿಶೇಷ ಅಧಿವೇಶನ ಕರೆಯಲಾಗಿತ್ತು. ಗೋಪ್ಯ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಪ್ರತಿಪಕ್ಷಗಳ ಸದಸ್ಯರು ಸದನದಲ್ಲಿ ಭಾರಿ ಗದ್ದಲ ಎಬ್ಬಿಸಿದ್ದರು. ಡಿಎಂಕೆ ಸದಸ್ಯರನ್ನು ಸದನದಿಂದ ಹೊರಹಾಕಿದ ನಂತರ ನಡೆದ ವಿಶ್ವಾಸಮತ ಯಾಚನೆಯಲ್ಲಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಬಹುಮತ ಸಾಬೀತುಪಡಿಸಿದ್ದರು.
‘ಗುಪ್ತ ಮತದಾನಕ್ಕೆ ಅವಕಾಶ ಕೊಡಬೇಕು’ ಎಂಬ ಬೇಡಿಕೆ ಮುಂದಿಟ್ಟಿದ್ದ ವಿರೋಧಪಕ್ಷ ಡಿಎಂಕೆ ಸದಸ್ಯರು ಸದನವನ್ನು ಕದನದ ಕಣವಾಗಿಸಿದ್ದರು. ಸದನದಲ್ಲಿ ನಡೆದ ಗಲಾಟೆಯ ವೇಳೆ ಸ್ಪೀಕರ್ ಪಿ. ಧನಪಾಲ್ ಅವರ ಅಂಗಿ ಹರಿದು, ಅವರತ್ತ ಚಪ್ಪಲಿ ಎಸೆಯಲಾಗಿತ್ತು.