ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ದಿಗಾಗಿ ಜನ ಬಿಜೆಪಿ ಬೆಂಬಲಿಸಿದ್ದಾರೆ: ಅಮಿತ್‌ ಶಾ

ಗೋವಾ, ಮಣಿಪುರದಲ್ಲೂ ಬಿಜೆಪಿ ಸರ್ಕಾರ ರಚಿಸಲಿದೆ
Last Updated 11 ಮಾರ್ಚ್ 2017, 14:00 IST
ಅಕ್ಷರ ಗಾತ್ರ

ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶ ಮತ್ತು ಉತ್ತರಾಖಂಡ್‌ ರಾಜ್ಯದಲ್ಲಿ ಸ್ಪಷ್ಟಬಹುಮತ ಪಡೆದಿರುವ  ಬಿಜೆಪಿ ಗೋವಾ ಮತ್ತು ಮಣಿಪುರದಲ್ಲೂ ಸರ್ಕಾರ ರಚಿಸಲಿದೆ ಎಂದು ಬಿಜೆಪಿಯ ರಾಷ್ಟ್ರೀಯ  ಅಧ್ಯಕ್ಷ ಅಮಿತ್‌ ಶಾ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮಿತ್‌ ಶಾ ಅವರು ದೇಶದ ಸಮಗ್ರ ಅಭಿವೃದ್ದಿಗಾಗಿ ಜನರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಇದು ಮತದಾರರ ಇಚ್ಛಾ ಶಕ್ತಿಯ ಗೆಲುವು ಎಂದರು.

ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿನ ಅಭೂತಪೂರ್ವ ಗೆಲುವು  ಹಾಗೂ ಮಣಿಪುರ ಮತ್ತು ಗೋವಾದಲ್ಲಿ ಪಕ್ಷ ಉತ್ತಮ ಸಾಧನೆ ಮಾಡಿದೆ. ಪಕ್ಷವನ್ನು ಬೆಂಬಲಿಸಿದ ಮತದಾರರಿಗೂ ಮತ್ತು ದುಡಿದ ಕಾರ್ಯಕರ್ತರಿಗೂ    ಧನ್ಯವಾದಗಳು ಎಂದರು.

ಜಾತಿವಾದ, ಭ್ರಷ್ಟಚಾರ, ಮತ್ತು ಕುಟುಂಬ ರಾಜಕಾರಣಕ್ಕೆ ಜನರು ಮನ್ನಣೆ ನೀಡಿಲ್ಲ ಎಂದು ಅಮಿತ್‌ ಶಾ ವಿರೋಧ ಪಕ್ಷಗಳನ್ನು ಪರೋಕ್ಷವಾಗಿ ಟೀಕಿಸಿದರು.

ಅಭಿವೃದ್ಧಿಗಾಗಿ ಮುಸ್ಲಿಂ ಸಮುದಾಯದವರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಪಕ್ಷದ ಈ ಗೆಲುವು ಮೋದಿಯವರ ಜನಪ್ರಿಯ ಕಾರ್ಯಕ್ರಮಗಳಿಗೆ ಸಂದ ಗೆಲುವಾಗಿದೆ ಎಂದು ಅಮಿತ್‌ ಶಾ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT