ಕಾಶಿವಿಶ್ವನಾಥಪುರ ಬಡಾವಣೆ ಹಾಗೂ ಐಟಿಐ ಬಡಾವಣೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ದಿನವು ಸಾವಿರಾರು ಮಂದಿ ಸಂಚರಿಸುತ್ತಾರೆ. ಆದರೆ, ರಸ್ತೆಯ ಬದಿಯಲ್ಲಿ ಕಸದ ರಾಶಿ ಬಿದ್ದಿದ್ದು, ಗಬ್ಬುನಾರುತ್ತಿದೆ. ಇದರಿಂದ ಇಲ್ಲಿನ ನಿವಾಸಿಗಳು ಮತ್ತು ವಾಹನ ಸವಾರರು ಮೂಗು ಮುಚ್ಚಿಕೊಂಡು ಹೋಗಬೇಕಾಗಿದೆ. ಸ್ಥಳೀಯ ನಿವಾಸಿ ನಯಾಜ್ಖಾನ್, ‘ಕೊಳೆತ ದ್ರಮರೂಪದ ತ್ಯಾಜ್ಯವು ರಸ್ತೆ ಮೇಲೆ ಹರಿಯುತ್ತಿದ್ದು, ನೊಣಗಳ ಕಾಟ ಹೆಚ್ಚಾಗಿದೆ. ಇದರಿಂದ ಸಾಂಕ್ರಾಮಿಕ ರೋಗವು ಹರಡುವ ಭೀತಿ ಎದುರಾಗಿದೆ’ ಎಂದು ದೂರಿದರು.