ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ್ತಿ ಮೀಸಲಾತಿ ಉಳಿಸಲು ಆಗ್ರಹ

Last Updated 13 ಮಾರ್ಚ್ 2017, 5:46 IST
ಅಕ್ಷರ ಗಾತ್ರ

ಮುಧೋಳ: ಎಸ್‌ಸಿ ಹಾಗೂ ಎಸ್.ಟಿ ಜನಾಂಗದ ನೌಕರರ ಬಡ್ತಿ ಮೀಸಲಾತಿ ತೀರ್ಪಿನ ವಿರುದ್ಧ ಮರು ಪರಿಶೀಲನಾ ಅರ್ಜಿ ಸಲ್ಲಿಸಿ ಬಡ್ತಿ ಮೀಸಲಾತಿಯನ್ನು ಉಳಿಸಲು ತುರ್ತು ಕ್ರಮ ಜರುಗಿಸಬೇಕು ಎಂದು ಹೋರಾಟಗಾರ ಎಂ.ಬಿ.ಸಿದಗೋಣಿ ಆಗ್ರಹಿಸಿದರು.

ಭಾನುವಾರ ಪ್ರತಿಭಟನೆಯಲ್ಲಿ ಮಾತನಾಡಿ ನ್ಯಾಯಾಲಯದ ತೀರ್ಪುನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸಂವಿಧಾನ ಬದ್ಧ ಹಕ್ಕನ್ನು ರಕ್ಷಿಸಲು ಧಾವಿಸಬೇಕು ಎಂದರು.

ಅಶೋಕ ಮೀಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಖಾಸಗಿ ವಲಯದ ಉದ್ಯೋಗಗಳಲ್ಲೂ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು. ಮನವಿ ಸ್ವೀಕರಿಸಿದ ಶಾಸಕ ಗೋವಿಂದ ಕಾರಜೋಳ ಮಾತನಾಡಿ, ಪರಿಶಿಷ್ಟ ಹಾಗೂ ಹಿಂದುಳಿದ ಜನಾಂಗದವರಿಗೆ ನ್ಯಾಯ ಸಿಗಬೇಕಾಗಿದೆ ಎಂದರು.

ಪ್ರಮುಖರಾದ ಬಿ.ಡಿ.ದೊಡಮನಿ, ಸಂತೋಷ ತಳಕೇರಿ, ವಿ.ಜಿ.ಭಜಂತ್ರಿ, ಹುಸೇನ್ ಚಲವಾದಿ,  ಮೀನಾಕ್ಷಿ ಚಲವಾದಿ, ಸತ್ಯವ್ವ ಮಾದರ, ಶ್ರೀಕಾಂತ ಮೇಗಾಡಿ ಸುಜ್ಞಾನಿ ಆಕಾಶಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT