ಅಧ್ಯಕ್ಷತೆ ವಹಿಸಿದ್ದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಮಾತನಾಡಿ, ಮಾತಿನ ಮೋಡಿ, ಹಣದ ಮೇಲೆ ಇವತ್ತು ಚುನಾವಣೆ ನಡೆಯುತ್ತಿವೆ. ಇದರ ಪರಿಣಾಮವೇ ಉತ್ತರ ಪ್ರದೇಶ ಚುನಾವಣಾ ಫಲಿತಾಂಶ ಎಂದು ಆರೋಪಿಸಿದರು.ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪ್ರೊ.ಎಂ.ಜಿ. ಚಂದ್ರಶೇಖರಯ್ಯ,ಅಧ್ಯಾಪಕರು ವಿದ್ಯಾರ್ಥಿಗಳಿಗೆ ಉನ್ನತವಾದುದನ್ನು ಕಲಿಸಬೇಕು ಎನ್ನುವ ತುಡಿತ ಸದಾ ಇರಬೇಕು. ಆಗ ಮಾತ್ರ ಉನ್ನತ ಶಿಕ್ಷಣ ಕ್ರಿಯಾಶೀಲವಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.