ಕಲಬುರ್ಗಿಯ ಕಾರ್ಯಕ್ರಮವೊಂದರಲ್ಲಿ ಉನ್ನತ ಶಿಕ್ಷಣ ಸಚಿವರು, ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಪ್ರಾಧ್ಯಾಪಕರ ಹುದ್ದೆಗಳನ್ನು ಮೌಖಿಕ ಸಂದರ್ಶನವಿಲ್ಲದೆ ಆನ್ಲೈನ್ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ತುಂಬುವುದಾಗಿ ಹೇಳಿರುವುದು ಸ್ವಾಗತಾರ್ಹ ನಡೆ.
ವಿಶ್ವವಿದ್ಯಾಲಯಗಳಲ್ಲಿನ ಪ್ರಾಧ್ಯಾಪಕ ಹುದ್ದೆಗಳಂತಹ ಉನ್ನತ ಹುದ್ದೆಗಳನ್ನು ಪಡೆಯಲು ಬರೀ ಅರ್ಹತೆ ಇದ್ದರೆ ಸಾಲದು. ಅದರೊಂದಿಗೆ ಹಣ, ಅಧಿಕಾರದ ಬಲವೂ ಇರಬೇಕೆಂಬ ಸ್ಥಿತಿ ಇದೆ. ಪ್ರತಿಭೆಗಿಂತ ಕಾಂಚಾಣ ಮತ್ತು ರಾಜಕೀಯದವರ ಕೃಪಾಕಟಾಕ್ಷವೇ ಮುಖ್ಯ ಎಂಬಂತಾಗಿದೆ.