ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ

Last Updated 14 ಮಾರ್ಚ್ 2017, 5:55 IST
ಅಕ್ಷರ ಗಾತ್ರ

ರಾಯಚೂರು: ದ್ವಿತೀಯ ಪಿಯುಸಿ ಲೆಕ್ಕಶಾಸ್ತ್ರ ಪ್ರಶ್ನೆಪತ್ರಿಕೆ ಬಯಲಾಗಿರುವುದನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌ ಜಿಲ್ಲಾ ಸಮಿತಿ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.

ಮಾನ್ವಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು. ಇನ್ನು ಮುಂದೆ ನಡೆಯುವ ಪರೀಕ್ಷೆಯ ಎಲ್ಲ ಪ್ರಶ್ನೆ ಪತ್ರಿಕೆಗಳಿಗೆ ಸೂಕ್ತ ಭದ್ರತೆ ನೀಡಬೇಕು. ವಿದ್ಯಾರ್ಥಿಗಳ ವಿರೋಧಿ ನೀತಿ ಅನುಸರಿಸುತ್ತಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಸಮಿತಿಯ ಪದಾಧಿಕಾರಿಗಳಾದ ಲಿಂಗರಾಜ, ಎಸ್‌.ಎಸ್‌.ಹಿರೇಮಠ, ಅಯ್ಯಪ್ಪ ತೋಳದ, ಶಿವಕುಮಾರ ಉಮಾದೇವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT