ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ 1 ಸಾವಿರ ಅಡಿ ಕೊಳವೆ ಬಾವಿ ಕೊರೆದರೂ ಕುಡಿಯಲು ಯೋಗ್ಯ ನೀರು ಸಿಗುತ್ತಿಲ್ಲ. ಈ ಪ್ರದೇಶದಲ್ಲಿ ಕೆರೆಗಳೂ ಬತ್ತಿಹೋಗಿವೆ. ಪಶುಗಳಿಗೆ ಮೇವು, ನೀರು ಸಿಗುತ್ತಿಲ್ಲ’ ಎಂದರು.