ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಿವಾಸ ಕಲ್ಯಾಣೋತ್ಸವ ಮಾರ್ಚ್ 18ಕ್ಕೆ

Last Updated 14 ಮಾರ್ಚ್ 2017, 19:43 IST
ಅಕ್ಷರ ಗಾತ್ರ

ಬೆಂಗಳೂರು: ಮಂಡ್ಯದ ಮೇಲುಕೋಟೆಯ ಯದುಗಿರಿ ಯತಿರಾಜ ಮಠವು ತಿರುಮಲ ತಿರುಪತಿ ದೇವಸ್ಥಾನಂ ಸಹಯೋಗದಿಂದ ಮಾರ್ಚ್ 18 ರಂದು ಅರಮನೆ ಮೈದಾನದ ಶೀಷ ಮಹಲ್‌ನಲ್ಲಿ ಸಂಜೆ 6 ಗಂಟೆಗೆ ಶ್ರೀನಿವಾಸ ಕಲ್ಯಾಣೋತ್ಸವ ಆಯೋಜಿಸಿದೆ.

ಕಲ್ಯಾಣೋತ್ಸವದಲ್ಲಿ ವಿಶೇಷ ಪೂಜೆ ನಡೆಯಲಿದೆ. ಇದೇ ವೇಳೆ ರಾಮಾನುಜಾಚಾರ್ಯರ (1017-1137) 1000 ನೇ ವರ್ಷಾಚರಣೆಯೂ ನಡೆಯಲಿದೆ. 

ಯದುಗಿರಿ ಯತಿರಾಜ ಮಠದ ಪೀಠಾಧಿಪತಿ ಯತಿರಾಜ ಜೀಯರ್ ಸ್ವಾಮೀಜಿ (ಶ್ರೀ ತಿರು ಸ್ವಾಮಿ) ಮಾತನಾಡಿ, ‘ಸತತ ಭೀಕರ ಬರಗಾಲ ಮತ್ತು ಪ್ರಕೃತಿ ವಿಕೋಪದಂತಹ ಸಮಸ್ಯೆಗಳಿಗೆ ರಾಜ್ಯ ತುತ್ತಾಗು­ತ್ತಿದ್ದು, ಜನ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಲೋಕ ಕಲ್ಯಾಣೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.

‘ಮಠವು ಕಳೆದ 6 ವರ್ಷಗಳಿಂದ ಹಲವಾರು ಸಮಾಜ ಸುಧಾರಣಾ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ.

ರಾಮಾನುಜಾಚಾರ್ಯರ ಮೌಲ್ಯಾಧಾರಿತ ನೀತಿಗಳು, ಪರಿಣಾಮಕಾರಿಯಾದ ಸಮಾಜ ಸೇವೆಗಳು ಮತ್ತು ಮಾನವೀಯ ಮೌಲ್ಯಗಳ ಪ್ರತಿಪಾದನೆ ಮೂಲಕ ಎಲ್ಲಾ ಭಾರತೀಯರ ಸಾಮಾಜಿಕ, ಆರ್ಥಿಕ ಕಾರ್ಯಚಟುವಟಿಕೆಗಳನ್ನು ವೃದ್ಧಿಸುವ ಉದ್ದೇಶ ಹೊಂದಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT