ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

19ಕ್ಕೆ ಗುರುವಂದನಾ ಕಾರ್ಯಕ್ರಮ

Last Updated 14 ಮಾರ್ಚ್ 2017, 19:44 IST
ಅಕ್ಷರ ಗಾತ್ರ

ಬೆಂಗಳೂರು: ‘ತುಮಕೂರಿನ ಸಿದ್ದಗಂಗಾ ಮಠದ   ಡಾ.ಶಿವಕುಮಾರ ಸ್ವಾಮೀಜಿ ಅವರ 110ನೇ  ಜನ್ಮ ದಿನಾಚರಣೆಯ ಅಂಗವಾಗಿ ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯ ವತಿಯಿಂದ ಮಾ.19 ರಂದು ವಿಜಯನಗರದ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯಲಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಬಿ.ಎಸ್.ಪರಮಶಿವಯ್ಯ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಾ.19 ರಿಂದ 20 ರವರೆಗೆ ವಿಜಯನಗರ, ಬಸವೇಶ್ವರ ನಗರ, ಅಕ್ಕಿಪೇಟೆ, ಚಾಮರಾಜಪೇಟೆ, ನಾಗರಭಾವಿ ಹಾಗೂ ಹಲವು  ವಾರ್ಡ್‌ ಗಳಲ್ಲಿ ಡಾ.ಶಿವಕುಮಾರ ಸ್ವಾಮೀಜಿ ಅವರ ಭಾವಚಿತ್ರದ ಶೋಭಾಯಾತ್ರೆ  ನಡೆಯಲಿದೆ. ಮೆರ ವಣಿಗೆಯಲ್ಲಿ ಜನಪದ ಕಲಾ ತಂಡಗಳು ಭಾಗವಹಿಸಲಿವೆ. ನಂತರ ಗುರುವಂದನಾ ಕಾರ್ಯಕ್ರಮ ನಡೆಯಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT