ಹಾಗೆಯೇ ಸೈನಿಕರು ಹಾಗೂ ಪೊಲೀಸರ ಕುಟುಂಬಗಳಿಗೆ ಅನುಕೂಲವಾಗುವಂತೆ ದಿನಬಳಕೆಯ ವಸ್ತುಗಳನ್ನು ಖರೀದಿಸಲು ಕ್ಯಾಂಟೀನ್ಗಳನ್ನು (ಮಳಿಗೆ) ತೆರೆಯಲಾಗಿದೆ. ಆದರೆ ಮಳೆ ಬೆಳೆ ಇಲ್ಲದೆ ತತ್ತರಿಸುತ್ತಿರುವ, ಪ್ರತಿ ವರ್ಷ ಒಂದಲ್ಲ ಒಂದು ಸಮಸ್ಯೆಗೆ ಸಿಲುಕಿ ನಲುಗುವ ರೈತರಿಗೆ ಮಾತ್ರ ಇಂತಹ ಯಾವುದೇ ಅನುಕೂಲಗಳಿಲ್ಲ.
ಜೀವನಾವಶ್ಯಕ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಲು ರೈತರಿಗೆ ಅನುಕೂಲವಾಗುವಂತೆ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಕ್ಯಾಂಟೀನ್ಗಳನ್ನು ತೆರೆಯಲು ಸರ್ಕಾರ ಮನಸ್ಸು ಮಾಡಬೇಕು.
-ಅಪ್ಪು ಮ. ಶಿರೋಳಮಠ, ವಿಜಯಪುರ