ಒಂದನೇ ತರಗತಿಯಿಂದ ಪರಿಣಾಮಕಾರಿ ಇಂಗ್ಲಿಷ್ ಬೋಧನೆ, ಖಾಸಗಿ ವಲಯದಲ್ಲಿ ಶೇ 100ರಷ್ಟು ಕನ್ನಡಿಗರಿಗೆ ಉದ್ಯೋಗ, 5-10 ರೂಪಾಯಿಗೆ ತಿಂಡಿ, ಊಟದ ಸೌಲಭ್ಯವಿರುವ ‘ನಮ್ಮ ಕ್ಯಾಂಟೀನ್’, ಹೊಸ ಮೆಡಿಕಲ್ ಕಾಲೇಜುಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆ, ಕೂಲಿ ಕಾರ್ಮಿಕರಿಗೆ ಪಿಂಚಣಿ ಸೇರಿದಂತೆ ಬಡವರಿಗೆ ಅನುಕೂಲವಾಗುವಂತಹ ಹಲವು ಯೋಜನೆಗಳನ್ನು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ.