ನವದೆಹಲಿ: ಪಶ್ಚಿಮ ಘಟ್ಟಗಳ ಕೆಲವು ಭಾಗಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿ ಕೇಂದ್ರ ಪರಿಸರ ಸಚಿವಾಲಯವು ಇತ್ತೀಚೆಗೆ ಪ್ರಕಟಿಸಿರುವ ಅಧಿಸೂಚನೆಯನ್ನು ಮರುಪರಿಶೀಲಿಸಬೇಕು ಎಂದು ಪಶ್ಚಿಮ ಘಟ್ಟ ಪ್ರದೇಶದ ಸಂಸದರು ಮನವಿ ಮಾಡಿದ್ದಾರೆ.
ಈ ಪ್ರದೇಶದ ಜನರ ಹಿತಾಸಕ್ತಿಯನ್ನು ಗಮನದಲ್ಲಿ ಇರಿಸಿಕೊಂಡು ಅಧಿಸೂಚನೆಯನ್ನು ಮರುಪರಿಶೀಲಿಸಬೇಕು ಎಂದು ಬಿಜೆಪಿ ಸಂಸದರಾದ ಬಿ.ಎಸ್. ಯಡಿಯೂರಪ್ಪ, ಸುರೇಶ್ ಅಂಗಡಿ, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್ ಮತ್ತು ಅನಂತಕುಮಾರ್ ಹೆಗ್ಡೆ ಒತ್ತಾಯಿಸಿದ್ದಾರೆ.