ಧಾರವಾಡ: ಹುಬ್ಬಳ್ಳಿಯಲ್ಲಿರುವ ಪ್ರತಿಷ್ಠಿತ ಕರ್ನಾಟಕ ವೈದ್ಯಕೀಯ ಸಂಸ್ಥೆ (ಕಿಮ್ಸ್) ನಿರ್ದೇಶಕ ಡಾ.ದತ್ತಾತ್ರೇಯ ಬಂಟ್ ನೇಮಕಾತಿಯನ್ನು ರದ್ದು ಪಡಿಸಿ ಇಲ್ಲಿನ ಹೈಕೋರ್ಟ್ ಗುರುವಾರ ಆದೇಶ ನೀಡಿದೆ.
‘2014ರ ಸೆಪ್ಟೆಂಬರ್ನಲ್ಲಿ ನಡೆದ ನೇಮಕಾತಿ ವೇಳೆ ಅರ್ಹರನ್ನು ಕಡೆಗಣಿಸಿ, ಡಾ. ಬಂಟ್ ಅವರನ್ನು ಈ ಹುದ್ದೆಗೆ ನೇಮಕ ಮಾಡಲಾಗಿದೆ’ ಎಂದು ದೂರಿ ಪೆಥಾಲಜಿ ವಿಭಾಗದ ಮುಖ್ಯಸ್ಥೆ ಡಾ.ಸುಜಾತಾ ಗಿರಿಯನ್ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.
ಸರ್ಕಾರ ನೇಮಿಸಿದ್ದ ಮೂವರು ಸದಸ್ಯರ ಸಮಿತಿ ಕೂಡ ಡಾ. ಬಂಟ್ ನೇಮಕಾತಿ ಸಂದರ್ಭದಲ್ಲಿ ನಿಯಮಗಳನ್ನು ಪಾಲಿಸಿಲ್ಲ ಎಂದು ಹೇಳಿತ್ತು. ಆದರೆ ಸರ್ಕಾರ ನಂತರವೂ ಅವರ ನೇಮಕಾತಿಯನ್ನು ರದ್ದು ಮಾಡಲಿಲ್ಲ ಎಂದು ದೂರಿ ಡಾ. ಸುಜಾತಾ ಹೈಕೋರ್ಟ್ ಮೆಟ್ಟಿಲೇರಿದ್ದರು.