ಬೆಂಗಳೂರು: ‘ಕೆಂಪೇಗೌಡರ ಸೊಸೆ ಲಕ್ಷ್ಮೀದೇವಮ್ಮ ಅವರ ಪ್ರತಿಮೆಯನ್ನು ಪಾಲಿಕೆಯ ಕೇಂದ್ರ ಕಚೇರಿ ಮುಂಭಾಗದಲ್ಲಿ ಪ್ರತಿಷ್ಠಾಪನೆ ಮಾಡುತ್ತೇವೆ’ ಎಂದು ಮೇಯರ್ ಜಿ.ಪದ್ಮಾವತಿ ಅವರು ತಿಳಿಸಿದರು.
ಶಿಲ್ಪಿ ಜಗದೀಶ್ ಅವರು ನಿರ್ಮಿಸುತ್ತಿರುವ ಪ್ರತಿಮೆಯನ್ನು ಗುರುವಾರ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರೊಂದಿಗೆ ಮಾತನಾಡಿದರು.
‘ಲಕ್ಷ್ಮೀದೇವಮ್ಮ ನಾಡಿಗಾಗಿ ಪ್ರಾಣವನ್ನು ಮುಡಿಪಾಗಿಟ್ಟ ಮಹಾತ್ಯಾಗಿ. ಅವರ ಪ್ರತಿಮೆಯನ್ನು ಬಿಬಿಎಂಪಿ ಆವರಣದಲ್ಲಿ ಪ್ರತಿಷ್ಠಾಪನೆ ಮಾಡಲು ತೀರ್ಮಾನಿಸಿದ್ದೇವೆ.