<p><strong>ನವದೆಹಲಿ: </strong>ಆರ್ಎಸ್ಎಸ್ ಮಾಜಿ ಪ್ರಚಾರಕ್ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಉತ್ತರಾಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.</p>.<p>ತ್ರಿವೇಂದ್ರ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ನಿನ್ನೆ ರಾತ್ರಿ ಅವರಿಗೆ ಮಾಹಿತಿ ನೀಡಿದ್ದು, ಶುಕ್ರವಾರ ಶಾಸಕಾಂಗ ಸಭೆಯಲ್ಲಿ ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗುವುದು ಎಂದು ಮೂಲಗಳು ಹೇಳಿವೆ.</p>.<p>ಉತ್ತರಾಖಂಡದಲ್ಲಿ ಬಿಜೆಪಿ ಮೂರನೆಯ ಎರಡರಷ್ಟು ಸ್ಥಾನಗಳನ್ನು ಪಡೆದಿರುವುದು ಇದೇ ಮೊದಲು. ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯ ತ್ರಿವೇಂದ್ರ ಸಿಂಗ್ ರಾವತ್, ಪ್ರಕಾಶ್ ಪಂತ್ ಮತ್ತು ಕಾಂಗ್ರೆಸ್ಸಿನಿಂದ ಬಿಜೆಪಿಗೆ ಬಂದಿರುವ ಸತ್ಪಾಲ್ ಮಹಾರಾಜ್ ಅವರ ಹೆಸರು ಕೇಳಿ ಬಂದಿತ್ತು.</p>.<p>ಇಂದು ನಡೆಯಲಿರುವ ಸಭೆಯಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ,ಸರೋಜ್ ಪಾಂಡೆ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಉತ್ತರಾಖಂಡ್ ರಾಜ್ಯದ ಉಸ್ತುವಾರಿ ವಹಿಸಿರುವ ಶ್ಯಾಮ್ ಜಾಜು ಭಾಗವಹಿಸಲಿದ್ದಾರೆ.</p>.<p>ಮಾರ್ಚ್ 18 ರಂದು ಡೆಹ್ರಾಡೂನ್ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.</p>.<p>ನೂತನ ಮುಖ್ಯಮಂತ್ರಿ ಅವರು ಮಾರ್ಚ್ 18ರಂದು 3 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಹಲವು ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ಉತ್ತರಾಖಂಡ್ ಬಿಜೆಪಿ ಅಧ್ಯಕ್ಷ ಅಜಯ್ ಭಟ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಆರ್ಎಸ್ಎಸ್ ಮಾಜಿ ಪ್ರಚಾರಕ್ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಉತ್ತರಾಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.</p>.<p>ತ್ರಿವೇಂದ್ರ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ನಿನ್ನೆ ರಾತ್ರಿ ಅವರಿಗೆ ಮಾಹಿತಿ ನೀಡಿದ್ದು, ಶುಕ್ರವಾರ ಶಾಸಕಾಂಗ ಸಭೆಯಲ್ಲಿ ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗುವುದು ಎಂದು ಮೂಲಗಳು ಹೇಳಿವೆ.</p>.<p>ಉತ್ತರಾಖಂಡದಲ್ಲಿ ಬಿಜೆಪಿ ಮೂರನೆಯ ಎರಡರಷ್ಟು ಸ್ಥಾನಗಳನ್ನು ಪಡೆದಿರುವುದು ಇದೇ ಮೊದಲು. ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯ ತ್ರಿವೇಂದ್ರ ಸಿಂಗ್ ರಾವತ್, ಪ್ರಕಾಶ್ ಪಂತ್ ಮತ್ತು ಕಾಂಗ್ರೆಸ್ಸಿನಿಂದ ಬಿಜೆಪಿಗೆ ಬಂದಿರುವ ಸತ್ಪಾಲ್ ಮಹಾರಾಜ್ ಅವರ ಹೆಸರು ಕೇಳಿ ಬಂದಿತ್ತು.</p>.<p>ಇಂದು ನಡೆಯಲಿರುವ ಸಭೆಯಲ್ಲಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ,ಸರೋಜ್ ಪಾಂಡೆ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಉತ್ತರಾಖಂಡ್ ರಾಜ್ಯದ ಉಸ್ತುವಾರಿ ವಹಿಸಿರುವ ಶ್ಯಾಮ್ ಜಾಜು ಭಾಗವಹಿಸಲಿದ್ದಾರೆ.</p>.<p>ಮಾರ್ಚ್ 18 ರಂದು ಡೆಹ್ರಾಡೂನ್ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.</p>.<p>ನೂತನ ಮುಖ್ಯಮಂತ್ರಿ ಅವರು ಮಾರ್ಚ್ 18ರಂದು 3 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಹಲವು ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ಉತ್ತರಾಖಂಡ್ ಬಿಜೆಪಿ ಅಧ್ಯಕ್ಷ ಅಜಯ್ ಭಟ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>