ಶಾಸಕ ಡಿ. ಸುಧಾಕರ್ ಮಾತನಾಡಿ, ‘ತಾಲ್ಲೂಕಿನಲ್ಲಿ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರಸ್ತುತ ತಾಲ್ಲೂಕಿನ 15 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಆರ್. ನಾಗೇಂದ್ರನಾಯ್ಕ, ಸಿ.ಬಿ. ಪಾಪಣ್ಣ, ಶಶಿಕಲಾ ಸುರೇಶ್ ಬಾಬು, ಗೀತಾನಾಗಕುಮಾರ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಚಂದ್ರಪ್ಪ, ಉಪಾಧ್ಯಕ್ಷೆ ಚಂದ್ರಕಲಾ, ಈರಲಿಂಗೇಗೌಡ, ಬಿ.ವಿ. ಮಾಧವ, ಇ.ಮಂಜುನಾಥ್, ಎ. ಮಂಜುನಾಥ್, ಎ.ಎಂ.ಅಮೃತೇಶ್ವರ್, ಖಾದಿ ರಮೇಶ್, ಕಲ್ಲಟ್ಟಿ ತಿಪ್ಪೇಸ್ವಾಮಿ, ಕೆ. ಓಂಕಾರಪ್ಪ, ಸಿ.ಎಚ್. ಕಾಂತರಾಜು, ಲತಾ ಸುಬ್ರಮಣ್ಯ, ಪುರುಷೋತ್ತಮ್, ಸಾದತ್ ಉಲ್ಲಾ ಇತರರು ಉಪಸ್ಥಿತರಿದ್ದರು.