ಆಯಾ ತಹಶೀಲ್ದಾರರೇ ನೀಡಿರುವ ಜಾತಿ ಪ್ರಮಾಣ ಪತ್ರಗಳ ಹಿಂದಿನ ದಾಖಲೆಗಳನ್ನು ಪರಿಶೀಲಿಸಿ ಜಿಲ್ಲಾ ಸಿಂಧುತ್ವ ಪ್ರಮಾಣ ಪತ್ರ ನೀಡಿ, ಸಮಿತಿಗೆ ಕೂಡಲೇ ಕಳುಹಿಸಿಕೊಡು ವಂತೆ ಸರಳ ವ್ಯವಸ್ಥೆ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
‘ಒಂದು ಗ್ರಾಮದಲ್ಲಿ ಎರಡು ಮೂರು ಕಡೆ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆಯಿದ್ದು, ಎ.ಕೆ ಕಾಲೊನಿ, ಹಟ್ಟಿಗಳಿಗೆ ನೀರು ಕೊಡುವುದಿಲ್ಲ ಎನ್ನುವುದು ಸಮಂ ಜಸವಲ್ಲ, ಅಂಥ ಪ್ರಕರಣ ಎಲ್ಲಾದರೂ ಕಂಡುಬಂದಲ್ಲಿ ಕೂಡಲೇ ಸಮಸ್ಯೆ ಬಗೆಹರಿಸಬೇಕು’ ಎಂದರು.
ಸಮಾಜ ಕಲ್ಯಾಣ ಅಧಿಕಾರಿ ಮಂಜುಳಮ್ಮ ಮಾತನಾಡಿ ‘ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಇನ್ನೂ 25 ಪ್ರಕರಣಗಳು ಬಾಕಿ ಇವೆ’ ಎಂದು ಮಾಹಿತಿ ನೀಡಿದರು.
ಸರ್ಕಾರಿ ಅಭಿಯೋಜಕ ನಾರಾಯಣ ಮಾತನಾಡಿ, ‘ಪರಿಶಿಷ್ಟ ಜಾತಿ, ಜನಾಂಗಗಳ ಮೇಲೆ ನಡೆದಿರುವ ಕೊಲೆ, ಅತ್ಯಾಚಾರ, ಜಾತಿನಿಂದನೆ ಹಾಗೂ ಗುಂಪು ಘರ್ಷಣೆ ಪ್ರಕರಣಗಳಲ್ಲಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿ ನ್ಯಾಯಾಲಯಕ್ಕೆ ಬರುವ ಮೊದಲು ಪ್ರಕರಣಗಳ ಸರಿಯಾದ ತನಿಖೆ ನಡೆಸಿ, ನಂತರ ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಶ್ರೀರಂಗಯ್ಯ, ‘ಸರ್ಕಾರ ಪರಿಹಾರ ನೀಡಿದ ಮೇಲೆ ರಾಜಿ ಸಂಧಾನದಿಂದ ಪ್ರಕರಣಗಳು ನ್ಯಾಯಾಲಯದಲ್ಲಿ ಬಿದ್ದು ಹೋಗುತ್ತವೆ. ಇದರಿಂದ ಸರ್ಕಾರಕ್ಕೆ ನಷ್ಟ ಸಂಭವಿಸುತ್ತಿದ್ದು, ಇಂಥ ಪ್ರಕರಣಗಳು ಮರುಕಳಿಸದಂತೆ ಮತ್ತು ಇಂಥ ಪ್ರಕರಣಗಳಲ್ಲಿ ಪರಿಹಾರದ ಮೊತ್ತವನ್ನು ಸರ್ಕಾರಕ್ಕೆ ಹಿಂಬರಿಸುವ ವ್ಯವಸ್ಥೆಗೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು’ ಎಂದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿತೇಶ್ ಪಾಟೀಲ್ ಮಾತನಾಡಿ ‘2017–18ನೇ ಸಾಲಿನಲ್ಲಿ ಎಸ್.ಸಿ.ಪಿ/ಟಿ.ಎಸ್.ಪಿ. ಯೋಜನೆಯಡಿ ಪರಿಶಿಷ್ಟ ಜನಾಂಗಗಳ ಕಾಲೋನಿ, ಹಟ್ಟಿ, ತಾಂಡಾಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗಳ ಕ್ರಿಯಾಯೋಜನೆ ರೂಪಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭಾಗವಹಿಸಿದ್ದರು.