ಕೂಡಲೇ ಕೇಸರೊಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಸತಿ ಯೋಜನೆಯ ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ರದ್ದು ಗೊಳಿಸಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಆದೇಶ ನೀಡಿದರು.
ಕೆಲ ನಿಮಿಷದ ನಂತರ, ಸಭೆಯಲ್ಲಿ ಹಾಜರಿದ್ದ ತಾಲ್ಲೂಕಿನ ಎಲ್ಲ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಸೇರಿ ಸಭೆಯಲ್ಲಿಯೇ ಸಚಿವರ ಬಳಿ ತೆರಳಿ ಕೆಸರೋಳ್ಳಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯ ಪರ ಸಮಜಾಯಿಷಿ ನೀಡಲು ಪ್ರಯತ್ನಿಸಿದಾಗ ಇನ್ನಷ್ಟು ಕೋಪಗೊಂಡ ಸಚಿವರು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ನರೇಗಾ ಯೋಜನೆಯಡಿ ಬರಗಾಲ ತಡೆಗಟ್ಟುವ ಕಾಮಗಾರಿಕೆಯಡಿಯಲ್ಲಿ ಚೆಕ್ ಡ್ಯಾಮ ನಿರ್ಮಿಸಲು ₹ 2.25 ಕೋಟಿಯ 45 ಕಾಮಗಾರಿ ಆದೇಶ ಪತ್ರವನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಿದರು.
ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಸುಭಾಷ ಕೋರ್ವೇಕರ, ತಾಲ್ಲೂಕ ಪಂಚಾಯ್ತಿ ಅಧ್ಯಕ್ಷೆ ರೀಟಾ ಸಿದ್ದಿ, ತಹಶೀಲ್ದಾರ್ ವಿದ್ಯಾಧರ ಗುಳಗುಳಿ, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣರಾವ ಯಕ್ಕುಂಡಿ, ವಿವಿಧ ಇಲಾಖೆಯ ನೋಡಲ್ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.