<p><strong>ದೊಡ್ಡಬಳ್ಳಾಪುರ:</strong> ‘ಮಹಿಳೆಯರ ಮೇಲಿನ ಶೋಷಣೆ ಖಂಡನೀಯ. ಈ ಬಗ್ಗೆ ಮಹಿಳೆಯರು ಎಚ್ಚೆತ್ತುಕೊಂಡು ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕಿದೆ’ ಎಂದು ನಗರ ಮಹಿಳಾ ಪೊಲೀಸ್ ಠಾಣೆ ಎಸ್ಐ ಬೇಬಿ ವಾಲೇಕರ್ ಹೇಳಿದರು.<br /> <br /> ನಗರದ ದತ್ತಾತ್ರೇಯ ಕಲ್ಯಾಣ ಮಂದಿರದಲ್ಲಿ ಸ್ವರ್ಣಲತಾ ಪ್ರದೇಶ ಒಕ್ಕೂಟದ ವತಿಯಿಂದ ಭಾನುವಾರ ನಡೆದ ಮಹಿಳಾ ದಿನಾಚರಣೆ ಹಾಗೂ ಮಹಿಳೆಯರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಶೋಷಣೆಗೊಳಗಾದ ಅಧಿಕಾರಿಗಳು ರಾಜೀನಾಮೆ ನೀಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಸಂದರ್ಭವನ್ನು ದಿಟ್ಟವಾಗಿ ಎದುರಿಸುವ ಧೈರ್ಯ ಬೆಳೆಸಿಕೊಳ್ಳಬೇಕು ಎಂದರು. ‘ಮಹಿಳೆಯರ ಯಾವುದೇ ಸಮಸ್ಯೆಗೆ ಪರಿಹಾರ ನೀಡಲು ನಿಮ್ಮೊಂದಿಗಿದ್ದೇನೆ’ ಎಂದು ಭರವಸೆ ನೀಡಿದರು.<br /> <br /> ರೈತ ಮುಖಂಡರಾದ ಸುಲೋಚನಮ್ಮ ಡಾ.ವೆಂಕಟರೆಡ್ಡಿ ಮಾತನಾಡಿ, ಮಹಿಳೆ ಸ್ವಾವಲಂಬಿಯಾಗಿ ಬದುಕಬೇಕು. ತಮಗಿರುವ ಎಲ್ಲ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯಬೇಕು ಎಂದರು. ಮಹಿಳಾ ಸ್ವಸಹಾಯ ಸಂಘಗಳಿಗೆ ನೆನೆಪಿನ ಕಾಣಿಕೆ ವಿತರಿಸಲಾಯಿತು.<br /> <br /> ಸ್ವರ್ಣಲತಾ ಪ್ರದೇಶ ಒಕ್ಕೂಟದ ಅಧ್ಯಕ್ಷೆ ರುಕ್ಮಿಣೀದೇವಿ. ಸ್ವರ್ಣಲತಾ ಪ್ರದೇಶ ಒಕ್ಕೂಟದ ಕಾರ್ಯದರ್ಶಿ ಗಿರಿಜಾ, ನಗರಸಭಾ ಸದಸ್ಯೆ ಮಂಜುಳಾ ಆಂಜನೇಯ , ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ‘ಮಹಿಳೆಯರ ಮೇಲಿನ ಶೋಷಣೆ ಖಂಡನೀಯ. ಈ ಬಗ್ಗೆ ಮಹಿಳೆಯರು ಎಚ್ಚೆತ್ತುಕೊಂಡು ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕಿದೆ’ ಎಂದು ನಗರ ಮಹಿಳಾ ಪೊಲೀಸ್ ಠಾಣೆ ಎಸ್ಐ ಬೇಬಿ ವಾಲೇಕರ್ ಹೇಳಿದರು.<br /> <br /> ನಗರದ ದತ್ತಾತ್ರೇಯ ಕಲ್ಯಾಣ ಮಂದಿರದಲ್ಲಿ ಸ್ವರ್ಣಲತಾ ಪ್ರದೇಶ ಒಕ್ಕೂಟದ ವತಿಯಿಂದ ಭಾನುವಾರ ನಡೆದ ಮಹಿಳಾ ದಿನಾಚರಣೆ ಹಾಗೂ ಮಹಿಳೆಯರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಶೋಷಣೆಗೊಳಗಾದ ಅಧಿಕಾರಿಗಳು ರಾಜೀನಾಮೆ ನೀಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಸಂದರ್ಭವನ್ನು ದಿಟ್ಟವಾಗಿ ಎದುರಿಸುವ ಧೈರ್ಯ ಬೆಳೆಸಿಕೊಳ್ಳಬೇಕು ಎಂದರು. ‘ಮಹಿಳೆಯರ ಯಾವುದೇ ಸಮಸ್ಯೆಗೆ ಪರಿಹಾರ ನೀಡಲು ನಿಮ್ಮೊಂದಿಗಿದ್ದೇನೆ’ ಎಂದು ಭರವಸೆ ನೀಡಿದರು.<br /> <br /> ರೈತ ಮುಖಂಡರಾದ ಸುಲೋಚನಮ್ಮ ಡಾ.ವೆಂಕಟರೆಡ್ಡಿ ಮಾತನಾಡಿ, ಮಹಿಳೆ ಸ್ವಾವಲಂಬಿಯಾಗಿ ಬದುಕಬೇಕು. ತಮಗಿರುವ ಎಲ್ಲ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯಬೇಕು ಎಂದರು. ಮಹಿಳಾ ಸ್ವಸಹಾಯ ಸಂಘಗಳಿಗೆ ನೆನೆಪಿನ ಕಾಣಿಕೆ ವಿತರಿಸಲಾಯಿತು.<br /> <br /> ಸ್ವರ್ಣಲತಾ ಪ್ರದೇಶ ಒಕ್ಕೂಟದ ಅಧ್ಯಕ್ಷೆ ರುಕ್ಮಿಣೀದೇವಿ. ಸ್ವರ್ಣಲತಾ ಪ್ರದೇಶ ಒಕ್ಕೂಟದ ಕಾರ್ಯದರ್ಶಿ ಗಿರಿಜಾ, ನಗರಸಭಾ ಸದಸ್ಯೆ ಮಂಜುಳಾ ಆಂಜನೇಯ , ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>