<p><strong>ಶ್ರೀರಂಗಪಟ್ಟಣ: </strong>ತಾಲ್ಲೂಕಿನ ಎಂ. ಶೆಟ್ಟಹಳ್ಳಿಯಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆ ಜನಮನ ರಂಜಿಸಿತು.<br /> <br /> ಗ್ರಾಮದ ಮುದ್ದುಮುತ್ತಲಾಂಬಿಕಾ ಗೆಳೆಯರ ಬಳಗ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಚಿಕ್ಕಮಗಳೂರು, ಅಜ್ಜಂಪುರ, ತಿ.ನರಸೀಪುರ, ಕೆ.ಆರ್.ನಗರ, ಹುಣಸೂರು, ಮಂಡ್ಯ, ಪಾಂಡವಪುರ ಇತರ ಕಡೆಗಳಿಂದ ಸುಮಾರು 39 ಜತೆ ಎತ್ತುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. <br /> <br /> ಈ ಬಾರಿಯ ಸ್ಪರ್ಧೆಯಲ್ಲಿ ಭಾರಿ ಗಾತ್ರದ ಹೋರಿಗಳು ಪಾಲ್ಗೊಂಡು ಗಮನ ಸೆಳೆದವು. ಸ್ಪರ್ಧೆ ನಡೆಯುವಾಗ ಎತ್ತುಗಳು ಗಾಡಿಯನ್ನು ಎರಡು ಬಾರಿ ಅಡ್ಡಾದಿಡ್ಡಿ ಎಳೆದ ಪರಿಣಾಮ ಮರದ ತಡೆಗೋಡೆ ಮುರಿದವು. ಇದರಿಂದ ಕೆಲಕಾಲ ಗೊಂದಲ ಸೃಷ್ಟಿಯಾಗಿತ್ತು. ಸಂಘಟಕರು ಪರಿಸ್ಥಿತಿಯನ್ನು ತಹಬದಿಗೆ ತರಲು ಪರದಾಡಿದರು.<br /> <br /> ಎತ್ತುಗಳು ಗಾಡಿಯನ್ನು ಎಳೆದು ಗುರಿಯತ್ತ ಮುನ್ನುಗ್ಗುವಾಗ ಅವುಗಳ ಬೆಂಬಲಿಗರು ಸಿಳ್ಳೆ, ಕೇಕೆ ಹಾಕಿ ಹುರಿದುಂಬಿಸಿದರು. ಗಾಡಿಯ ಮೇಲೆ ಇದ್ದವರು ಚಾವಟಿ ಬೀಸುತ್ತಾ, ತಮ್ಮ ಎತ್ತುಗಳ ಬಾಲ ಮುರಿಯುತ್ತಾ, ಹಲ್ಲಿನಿಂದ ಕಚ್ಚುತ್ತಾ ಗುರಿ ತಲುಪಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದ ದೃಶ್ಯ ಕಂಡುಬಂತು.<br /> <br /> ಹಳ್ಳಿಕಾರ್ ಮತ್ತು ಅಮೃತಮಹಲ್ ತಳಿಯ ಜೋಡಿ ಎತ್ತುಗಳು ಹೆಚ್ಚಾಗಿದ್ದವು. ಕಾಂಗ್ರೆಸ್ ಮುಖಂಡ ದರ್ಶನ್ ಲಿಂಗರಾಜು ಸ್ಪರ್ಧೆಗೆ ಚಾಲನೆ ನೀಡಿದರು. ನಾಕೌಟ್ ಮಾದರಿಯಲ್ಲಿ ನಡೆದ ಈ ಸ್ಪರ್ಧೆ ಸಂಜೆ 7 ಗಂಟೆಯಾದರೂ ಮುಗಿದಿರಲಿಲ್ಲ.<br /> <br /> ಸ್ಪರ್ಧೆಯಲ್ಲಿ ಗೆಲ್ಲುವ ಎತ್ತುಗಳ ಮಾಲೀಕರಿಗೆ ಪ್ರಥಮ ₹ 40 ಸಾವಿರ, ದ್ವಿತೀಯ ₹ 30 ಸಾವಿರ, ತೃತೀಯ ₹ 20 ಸಾವಿರ ಹಾಗೂ ಚತುರ್ಥ ₹ 10 ಸಾವಿರ ನಗದು ಬಹುಮಾನ ನೀಡಲಾಗುವುದು ಎಂದು ಆಯೋಜಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ: </strong>ತಾಲ್ಲೂಕಿನ ಎಂ. ಶೆಟ್ಟಹಳ್ಳಿಯಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆ ಜನಮನ ರಂಜಿಸಿತು.<br /> <br /> ಗ್ರಾಮದ ಮುದ್ದುಮುತ್ತಲಾಂಬಿಕಾ ಗೆಳೆಯರ ಬಳಗ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಚಿಕ್ಕಮಗಳೂರು, ಅಜ್ಜಂಪುರ, ತಿ.ನರಸೀಪುರ, ಕೆ.ಆರ್.ನಗರ, ಹುಣಸೂರು, ಮಂಡ್ಯ, ಪಾಂಡವಪುರ ಇತರ ಕಡೆಗಳಿಂದ ಸುಮಾರು 39 ಜತೆ ಎತ್ತುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. <br /> <br /> ಈ ಬಾರಿಯ ಸ್ಪರ್ಧೆಯಲ್ಲಿ ಭಾರಿ ಗಾತ್ರದ ಹೋರಿಗಳು ಪಾಲ್ಗೊಂಡು ಗಮನ ಸೆಳೆದವು. ಸ್ಪರ್ಧೆ ನಡೆಯುವಾಗ ಎತ್ತುಗಳು ಗಾಡಿಯನ್ನು ಎರಡು ಬಾರಿ ಅಡ್ಡಾದಿಡ್ಡಿ ಎಳೆದ ಪರಿಣಾಮ ಮರದ ತಡೆಗೋಡೆ ಮುರಿದವು. ಇದರಿಂದ ಕೆಲಕಾಲ ಗೊಂದಲ ಸೃಷ್ಟಿಯಾಗಿತ್ತು. ಸಂಘಟಕರು ಪರಿಸ್ಥಿತಿಯನ್ನು ತಹಬದಿಗೆ ತರಲು ಪರದಾಡಿದರು.<br /> <br /> ಎತ್ತುಗಳು ಗಾಡಿಯನ್ನು ಎಳೆದು ಗುರಿಯತ್ತ ಮುನ್ನುಗ್ಗುವಾಗ ಅವುಗಳ ಬೆಂಬಲಿಗರು ಸಿಳ್ಳೆ, ಕೇಕೆ ಹಾಕಿ ಹುರಿದುಂಬಿಸಿದರು. ಗಾಡಿಯ ಮೇಲೆ ಇದ್ದವರು ಚಾವಟಿ ಬೀಸುತ್ತಾ, ತಮ್ಮ ಎತ್ತುಗಳ ಬಾಲ ಮುರಿಯುತ್ತಾ, ಹಲ್ಲಿನಿಂದ ಕಚ್ಚುತ್ತಾ ಗುರಿ ತಲುಪಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದ ದೃಶ್ಯ ಕಂಡುಬಂತು.<br /> <br /> ಹಳ್ಳಿಕಾರ್ ಮತ್ತು ಅಮೃತಮಹಲ್ ತಳಿಯ ಜೋಡಿ ಎತ್ತುಗಳು ಹೆಚ್ಚಾಗಿದ್ದವು. ಕಾಂಗ್ರೆಸ್ ಮುಖಂಡ ದರ್ಶನ್ ಲಿಂಗರಾಜು ಸ್ಪರ್ಧೆಗೆ ಚಾಲನೆ ನೀಡಿದರು. ನಾಕೌಟ್ ಮಾದರಿಯಲ್ಲಿ ನಡೆದ ಈ ಸ್ಪರ್ಧೆ ಸಂಜೆ 7 ಗಂಟೆಯಾದರೂ ಮುಗಿದಿರಲಿಲ್ಲ.<br /> <br /> ಸ್ಪರ್ಧೆಯಲ್ಲಿ ಗೆಲ್ಲುವ ಎತ್ತುಗಳ ಮಾಲೀಕರಿಗೆ ಪ್ರಥಮ ₹ 40 ಸಾವಿರ, ದ್ವಿತೀಯ ₹ 30 ಸಾವಿರ, ತೃತೀಯ ₹ 20 ಸಾವಿರ ಹಾಗೂ ಚತುರ್ಥ ₹ 10 ಸಾವಿರ ನಗದು ಬಹುಮಾನ ನೀಡಲಾಗುವುದು ಎಂದು ಆಯೋಜಕರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>