ಗುಂಡ್ಲುಪೇಟೆ: ಜಿಲ್ಲೆಯಲ್ಲಿ ಭೀಕರ ಬರವಿದ್ದರೂ, ಈ ಕಡೆ ಬಾರದ ಸಚಿವರು ಈ ಕ್ಷೇತ್ರದಲ್ಲಿ ಚುನಾವಣೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಡಿ ಸಂಪುಟವನ್ನೇ ಪ್ರಚಾರಕ್ಕೋಸ್ಕರ ಕರೆತರುತ್ತಿರುವುದು ಹಾಸ್ಯಸ್ಪದ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಟೀಕಿಸಿದರು.
ಪಟ್ಟಣದಲ್ಲಿ ಬಿಜೆಪಿ ನೂತನ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ರೀತಿ ಮಂತ್ರಿ ಮಂಡಲವನ್ನು ದುರುಪಯೋಗ ಮಾಡಿಕೊಂಡು ಮತ ದಾರರನ್ನು ಸೆಳೆಯಲು ಸಾಧ್ಯವಾಗುವು ದಿಲ್ಲ. ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದ ಸಾಧನೆ ಎಂದು ಬಿಂಬಿ ಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುದಾನವನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು ದೂರಿದರು.
ಎಚ್.ಎಸ್.ಮಹದೇವಪ್ರಸಾದ್ ಅವಧಿಯಲ್ಲಿ ತಾಲ್ಲೂಕನ್ನು ಮಾದರಿ ಕ್ಷೇತ್ರವನ್ನಾಗಿಸಲು ಸಾಧ್ಯವಿದ್ದರೂ ಅಭಿವೃದ್ಧಿ ಕಾರ್ಯಗಳು ಸಮರ್ಪಕ ವಾಗಿಲ್ಲ. ಯುವಕರಿಗೆ ಉದ್ಯೋಗಾವ ಕಾಶ ದೊರಕಿಲ್ಲ.