<p><strong>ಚಾಮರಾಜನಗರ:</strong> ಸತತ ಐದು ವರ್ಷದಿಂದ ಜಿಲ್ಲೆಯ ರೈತರು ಮಳೆ ಇಲ್ಲದೆ ಕಂಗಾಲಾಗಿದ್ದಾರೆ. ಜಿಲ್ಲೆಗೆ ಬರಪೀಡಿತವೆಂಬ ಹಣೆಪಟ್ಟಿ ಅಂಟಿಕೊಂಡಿದೆ.<br /> ಈ ವರ್ಷವಾದರೂ ಉತ್ತಮ ಮಳೆ ಸುರಿಯುತ್ತದೆಯೇ? ಎಂದು ರೈತರು ಆಸೆಗಣ್ಣಿನಿಂದ ನೋಡುತ್ತಿದ್ದಾರೆ. ಈ ನಡುವೆಯೇ ಎರಡು ದಿನದ ಹಿಂದೆ ಸುರಿದ ಮಳೆಯು ಬರದಿಂದ ತತ್ತರಿಸಿದ್ದ ರೈತರಲ್ಲಿ ಜೀವನೋತ್ಸಾಹ ಹೆಚ್ಚಿಸಿದೆ.<br /> <br /> ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ, ಕಸಬಾ, ತೆರಕಣಾಂಬಿ ಹೋಬಳಿಯಲ್ಲಿ ಹದ ಮಳೆಯಾಗಿದೆ. ಚಾಮರಾಜನಗರ ತಾಲ್ಲೂಕಿನ ಉಡಿಗಾಲ, ಬೇಡರಪುರ, ಹೆಗ್ಗೋಠಾರ, ಮೇಗಲಹುಂಡಿ, ಮುಕ್ಕಡಹಳ್ಳಿ ಸುತ್ತಮುತ್ತ ಉತ್ತಮ ಮಳೆ ಸುರಿದಿದೆ. ಜಿಲ್ಲಾ ಕೇಂದ್ರದ ಸುತ್ತಮುತ್ತಲಿನ ಹಳ್ಳಿಗಳಲ್ಲೂ ಹದ ಮಳೆಯಾಗಿದೆ. ಯಳಂದೂರು ತಾಲ್ಲೂಕಿನ 2 ಹೋಬಳಿಯಲ್ಲಿ ಮಳೆ ಸುರಿದಿದೆ. ಇದರಿಂದ ಅನ್ನದಾತರ ಮೊಗದಲ್ಲಿ ಮಂದಹಾಸ ಇಣುಕಿದೆ.<br /> <br /> ಜಿಲ್ಲೆಯಲ್ಲಿ ಪ್ರತಿವರ್ಷ ಯುಗಾದಿ ಹಬ್ಬ ಆರಂಭದ ವಾರ ಮತ್ತು ಹಬ್ಬದ ನಂತರ ವಾರಗಳಲ್ಲಿ ಮಳೆ ಸುರಿಯುತ್ತಿತ್ತು. ಚಾಮರಾಜನಗರ ತಾಲ್ಲೂಕಿನ ರೈತರು ಈ ಮಳೆಗೆ ಹೈಬ್ರೀಡ್ ಜೋಳ, ಜೋಳ, ಸೂರ್ಯಕಾಂತಿ, ಹೆಸರು, ಉದ್ದು ಬಿತ್ತನೆ ಮಾಡುತ್ತಾರೆ.<br /> <br /> ಗುಂಡ್ಲುಪೇಟೆ ತಾಲ್ಲೂಕಿನ ಅನ್ನದಾತರ ಈ ಬೆಳೆಗಳನ್ನೇ ಬಿತ್ತನೆ ಮಾಡುವುದು ವಾಡಿಕೆ. ಜತೆಗೆ, ಈ ತಾಲ್ಲೂಕಿನ ತೆರಕಣಾಂಬಿ, ಕಸಬಾ, ಬೇಗೂರು ಮತ್ತು ಚಾಮರಾಜನಗರ ತಾಲ್ಲೂಕಿನ ಹರವೆ ಹೋಬಳಿಯಲ್ಲಿ ಬಿಟಿ ಹತ್ತಿ ಬಿತ್ತನೆ ಮಾಡಲಾಗುತ್ತದೆ. ಈ ಬಿತ್ತನೆ ಪೂರ್ಣಗೊಂಡ ಬಳಿಕ ರೈತರು ಶೇಂಗಾ ಬಿತ್ತನೆಗೆ ಮುಂದಾಗುತ್ತಾರೆ.<br /> <br /> ಈಗಾಗಲೇ, ಮಳೆ ಸುರಿದಿರುವ ಪ್ರದೇಶದಲ್ಲಿ ರೈತರು ಬಿತ್ತನೆಗೆ ಜಮೀನಿನ ಸಿದ್ಧತೆಗೊಳಿಸುವಲ್ಲಿ ನಿರತರಾಗಿದ್ದಾರೆ. ಗುಂಡ್ಲುಪೇಟೆ ಮತ್ತು ಚಾಮರಾಜನಗರ ತಾಲ್ಲೂಕಿನಲ್ಲಿ ಪೂರ್ವ ಮುಂಗಾರು ಹಂಗಾಮಿನಡಿ ಮಳೆ ಸುರಿಯುವುದು ವಾಡಿಕೆ. ಆದರೆ, ಮುಂಗಾರು ಹಂಗಾಮಿನಲ್ಲಿ ಈ ತಾಲ್ಲೂಕುಗಳಲ್ಲಿ ಮಳೆ ಸುರಿಯುವುದಿಲ್ಲ. ಈ ಹವಾಮಾನ ವೈಪರೀತ್ಯದಿಂದ ರೈತರು ಪ್ರತಿವರ್ಷ ತೊಂದರೆಗೆ ಸಿಲುಕುತ್ತಿದ್ದಾರೆ.<br /> <br /> <strong>ಬಿತ್ತನೆಬೀಜದ ಕೊರತೆ ಇಲ್ಲ: ‘</strong>ಗುಂಡ್ಲುಪೇಟೆ, ಚಾಮರಾಜನಗರ ಮತ್ತು ಯಳಂದೂರು ತಾಲ್ಲೂಕಿನ ಹಲವೆಡೆ ಮಳೆ ಸುರಿದಿದೆ. ಪೂರ್ವ ಮುಂಗಾರು ಹಂಗಾಮಿನಡಿ 24 ಸಾವಿರ ಟನ್ನಷ್ಟು ಹೈಬ್ರೀಡ್ ಜೋಳ, ಸೂರ್ಯಕಾಂತಿ, ಜೋಳ, ಹತ್ತಿ, ಹೆಸರು, ಉದ್ದು, ಶೇಂಗಾ ಬಿತ್ತನೆ ಬೀಜದ ಆವಶ್ಯಕತೆಯಿದೆ.<br /> <br /> ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆಬೀಜ ಮತ್ತು ರಸಗೊಬ್ಬರ ದಾಸ್ತಾನು ಇದೆ. ರೈತರು ಆತಂಕಪಡುವ ಅಗತ್ಯವಿಲ್ಲ’ ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕ ಜಿ.ಎಚ್. ಯೋಗೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಟ್ರ್ಯಾಕ್ಟರ್ಗೆ ಹೆಚ್ಚಿದ ಬೇಡಿಕೆ<br /> ಚಾಮರಾಜನಗರ: </strong>ಪ್ರಸ್ತುತ ಗ್ರಾಮೀಣ ಪ್ರದೇಶದಲ್ಲಿ ಜಾನುವಾರು ಬಳಸಿಕೊಂಡು ಉಳುಮೆ ಮಾಡುವ ಪದ್ಧತಿ ಕಡಿಮೆಯಾಗಿದೆ. ಎತ್ತುಗಳನ್ನು ಬಳಸಿ ಹೊಲದಲ್ಲಿ ಉಳುಮೆ ಮಾಡುವ ಸಾಂಪ್ರದಾಯಿಕ ವಿಧಾನ ಕಂಡುಬರುತ್ತಿಲ್ಲ. ಜಮೀನಿನ ಮಾಲೀಕರು ಉಳುಮೆಗೆ ಟ್ರ್ಯಾಕ್ಟರ್ಗಳ ಮೊರೆ ಹೋಗುವುದೇ ಹೆಚ್ಚು.</p>.<p>ಹದ ಮಳೆ ಸುರಿದಿರುವುದರಿಂದ ಉಳುಮೆ ಟ್ರ್ಯಾಕ್ಟರ್ಗಳಿಗೆ ಬೇಡಿಕೆಯೂ ಹೆಚ್ಚಿದೆ. ಒಂದು ಗಂಟೆಗೆ ₹ 550ರಿಂದ ₹ 600 ದರ ನಿಗದಿಪಡಿಸಿ ಉಳುಮೆ ಮಾಡಲಾಗುತ್ತಿದೆ. ಮಳೆ ಇದೇ ರೀತಿ ಮುಂದುವರಿದರೆ ಟ್ರ್ಯಾಕ್ಟರ್ಗಳಿಗೆ ಬೇಡಿಕೆ ಮತ್ತಷ್ಟು ಹೆಚ್ಚಲಿದೆ.<br /> <br /> ‘ಒಂದು ಗಂಟೆಗೆ 2 ಎಕರೆಯಷ್ಟು ಜಮೀನಿನ ಉಳುಮೆ ಮಾಡಬಹುದು. ಎರಡು ದಿನದ ಹಿಂದೆ ಸುರಿದ ಮಳೆಗೆ ಜಮೀನಿನಲ್ಲಿ ತೇವಾಂಶ ಹೆಚ್ಚಿತ್ತು. ಹೊಲದ ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹಗೊಂಡಿದ್ದರಿಂದ ಉಳುಮೆಗೆ ಸಾಧ್ಯವಾಗಿರಲಿಲ್ಲ. ಭಾನುವಾರದಿಂದ ಹೆಗ್ಗೋಠಾರ ಭಾಗದಲ್ಲಿ ಉಳುಮೆ ನಡೆಯುತ್ತಿದೆ’ ಎಂದು ಟ್ರ್ಯಾಕ್ಟರ್ ಚಾಲಕ ರವಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>*<br /> ಸರ್ಕಾರ ಇನ್ನೂ ಬಿತ್ತನೆಬೀಜದ ದರ ನಿಗದಿಪಡಿಸಿಲ್ಲ. ವಾರದೊಳಗೆ ಆದೇಶ ಬರಲಿದೆ. ಆ ನಂತರ ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆಬೀಜ ವಿತರಣೆಗೆ ಕ್ರಮವಹಿಸಲಾಗುವುದು.<br /> <em><strong>-ಜಿ.ಎಚ್. ಯೋಗೇಶ್,<br /> ಉಪ ನಿರ್ದೇಶಕ, ಕೃಷಿ ಇಲಾಖೆ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಸತತ ಐದು ವರ್ಷದಿಂದ ಜಿಲ್ಲೆಯ ರೈತರು ಮಳೆ ಇಲ್ಲದೆ ಕಂಗಾಲಾಗಿದ್ದಾರೆ. ಜಿಲ್ಲೆಗೆ ಬರಪೀಡಿತವೆಂಬ ಹಣೆಪಟ್ಟಿ ಅಂಟಿಕೊಂಡಿದೆ.<br /> ಈ ವರ್ಷವಾದರೂ ಉತ್ತಮ ಮಳೆ ಸುರಿಯುತ್ತದೆಯೇ? ಎಂದು ರೈತರು ಆಸೆಗಣ್ಣಿನಿಂದ ನೋಡುತ್ತಿದ್ದಾರೆ. ಈ ನಡುವೆಯೇ ಎರಡು ದಿನದ ಹಿಂದೆ ಸುರಿದ ಮಳೆಯು ಬರದಿಂದ ತತ್ತರಿಸಿದ್ದ ರೈತರಲ್ಲಿ ಜೀವನೋತ್ಸಾಹ ಹೆಚ್ಚಿಸಿದೆ.<br /> <br /> ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ, ಕಸಬಾ, ತೆರಕಣಾಂಬಿ ಹೋಬಳಿಯಲ್ಲಿ ಹದ ಮಳೆಯಾಗಿದೆ. ಚಾಮರಾಜನಗರ ತಾಲ್ಲೂಕಿನ ಉಡಿಗಾಲ, ಬೇಡರಪುರ, ಹೆಗ್ಗೋಠಾರ, ಮೇಗಲಹುಂಡಿ, ಮುಕ್ಕಡಹಳ್ಳಿ ಸುತ್ತಮುತ್ತ ಉತ್ತಮ ಮಳೆ ಸುರಿದಿದೆ. ಜಿಲ್ಲಾ ಕೇಂದ್ರದ ಸುತ್ತಮುತ್ತಲಿನ ಹಳ್ಳಿಗಳಲ್ಲೂ ಹದ ಮಳೆಯಾಗಿದೆ. ಯಳಂದೂರು ತಾಲ್ಲೂಕಿನ 2 ಹೋಬಳಿಯಲ್ಲಿ ಮಳೆ ಸುರಿದಿದೆ. ಇದರಿಂದ ಅನ್ನದಾತರ ಮೊಗದಲ್ಲಿ ಮಂದಹಾಸ ಇಣುಕಿದೆ.<br /> <br /> ಜಿಲ್ಲೆಯಲ್ಲಿ ಪ್ರತಿವರ್ಷ ಯುಗಾದಿ ಹಬ್ಬ ಆರಂಭದ ವಾರ ಮತ್ತು ಹಬ್ಬದ ನಂತರ ವಾರಗಳಲ್ಲಿ ಮಳೆ ಸುರಿಯುತ್ತಿತ್ತು. ಚಾಮರಾಜನಗರ ತಾಲ್ಲೂಕಿನ ರೈತರು ಈ ಮಳೆಗೆ ಹೈಬ್ರೀಡ್ ಜೋಳ, ಜೋಳ, ಸೂರ್ಯಕಾಂತಿ, ಹೆಸರು, ಉದ್ದು ಬಿತ್ತನೆ ಮಾಡುತ್ತಾರೆ.<br /> <br /> ಗುಂಡ್ಲುಪೇಟೆ ತಾಲ್ಲೂಕಿನ ಅನ್ನದಾತರ ಈ ಬೆಳೆಗಳನ್ನೇ ಬಿತ್ತನೆ ಮಾಡುವುದು ವಾಡಿಕೆ. ಜತೆಗೆ, ಈ ತಾಲ್ಲೂಕಿನ ತೆರಕಣಾಂಬಿ, ಕಸಬಾ, ಬೇಗೂರು ಮತ್ತು ಚಾಮರಾಜನಗರ ತಾಲ್ಲೂಕಿನ ಹರವೆ ಹೋಬಳಿಯಲ್ಲಿ ಬಿಟಿ ಹತ್ತಿ ಬಿತ್ತನೆ ಮಾಡಲಾಗುತ್ತದೆ. ಈ ಬಿತ್ತನೆ ಪೂರ್ಣಗೊಂಡ ಬಳಿಕ ರೈತರು ಶೇಂಗಾ ಬಿತ್ತನೆಗೆ ಮುಂದಾಗುತ್ತಾರೆ.<br /> <br /> ಈಗಾಗಲೇ, ಮಳೆ ಸುರಿದಿರುವ ಪ್ರದೇಶದಲ್ಲಿ ರೈತರು ಬಿತ್ತನೆಗೆ ಜಮೀನಿನ ಸಿದ್ಧತೆಗೊಳಿಸುವಲ್ಲಿ ನಿರತರಾಗಿದ್ದಾರೆ. ಗುಂಡ್ಲುಪೇಟೆ ಮತ್ತು ಚಾಮರಾಜನಗರ ತಾಲ್ಲೂಕಿನಲ್ಲಿ ಪೂರ್ವ ಮುಂಗಾರು ಹಂಗಾಮಿನಡಿ ಮಳೆ ಸುರಿಯುವುದು ವಾಡಿಕೆ. ಆದರೆ, ಮುಂಗಾರು ಹಂಗಾಮಿನಲ್ಲಿ ಈ ತಾಲ್ಲೂಕುಗಳಲ್ಲಿ ಮಳೆ ಸುರಿಯುವುದಿಲ್ಲ. ಈ ಹವಾಮಾನ ವೈಪರೀತ್ಯದಿಂದ ರೈತರು ಪ್ರತಿವರ್ಷ ತೊಂದರೆಗೆ ಸಿಲುಕುತ್ತಿದ್ದಾರೆ.<br /> <br /> <strong>ಬಿತ್ತನೆಬೀಜದ ಕೊರತೆ ಇಲ್ಲ: ‘</strong>ಗುಂಡ್ಲುಪೇಟೆ, ಚಾಮರಾಜನಗರ ಮತ್ತು ಯಳಂದೂರು ತಾಲ್ಲೂಕಿನ ಹಲವೆಡೆ ಮಳೆ ಸುರಿದಿದೆ. ಪೂರ್ವ ಮುಂಗಾರು ಹಂಗಾಮಿನಡಿ 24 ಸಾವಿರ ಟನ್ನಷ್ಟು ಹೈಬ್ರೀಡ್ ಜೋಳ, ಸೂರ್ಯಕಾಂತಿ, ಜೋಳ, ಹತ್ತಿ, ಹೆಸರು, ಉದ್ದು, ಶೇಂಗಾ ಬಿತ್ತನೆ ಬೀಜದ ಆವಶ್ಯಕತೆಯಿದೆ.<br /> <br /> ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆಬೀಜ ಮತ್ತು ರಸಗೊಬ್ಬರ ದಾಸ್ತಾನು ಇದೆ. ರೈತರು ಆತಂಕಪಡುವ ಅಗತ್ಯವಿಲ್ಲ’ ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕ ಜಿ.ಎಚ್. ಯೋಗೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಟ್ರ್ಯಾಕ್ಟರ್ಗೆ ಹೆಚ್ಚಿದ ಬೇಡಿಕೆ<br /> ಚಾಮರಾಜನಗರ: </strong>ಪ್ರಸ್ತುತ ಗ್ರಾಮೀಣ ಪ್ರದೇಶದಲ್ಲಿ ಜಾನುವಾರು ಬಳಸಿಕೊಂಡು ಉಳುಮೆ ಮಾಡುವ ಪದ್ಧತಿ ಕಡಿಮೆಯಾಗಿದೆ. ಎತ್ತುಗಳನ್ನು ಬಳಸಿ ಹೊಲದಲ್ಲಿ ಉಳುಮೆ ಮಾಡುವ ಸಾಂಪ್ರದಾಯಿಕ ವಿಧಾನ ಕಂಡುಬರುತ್ತಿಲ್ಲ. ಜಮೀನಿನ ಮಾಲೀಕರು ಉಳುಮೆಗೆ ಟ್ರ್ಯಾಕ್ಟರ್ಗಳ ಮೊರೆ ಹೋಗುವುದೇ ಹೆಚ್ಚು.</p>.<p>ಹದ ಮಳೆ ಸುರಿದಿರುವುದರಿಂದ ಉಳುಮೆ ಟ್ರ್ಯಾಕ್ಟರ್ಗಳಿಗೆ ಬೇಡಿಕೆಯೂ ಹೆಚ್ಚಿದೆ. ಒಂದು ಗಂಟೆಗೆ ₹ 550ರಿಂದ ₹ 600 ದರ ನಿಗದಿಪಡಿಸಿ ಉಳುಮೆ ಮಾಡಲಾಗುತ್ತಿದೆ. ಮಳೆ ಇದೇ ರೀತಿ ಮುಂದುವರಿದರೆ ಟ್ರ್ಯಾಕ್ಟರ್ಗಳಿಗೆ ಬೇಡಿಕೆ ಮತ್ತಷ್ಟು ಹೆಚ್ಚಲಿದೆ.<br /> <br /> ‘ಒಂದು ಗಂಟೆಗೆ 2 ಎಕರೆಯಷ್ಟು ಜಮೀನಿನ ಉಳುಮೆ ಮಾಡಬಹುದು. ಎರಡು ದಿನದ ಹಿಂದೆ ಸುರಿದ ಮಳೆಗೆ ಜಮೀನಿನಲ್ಲಿ ತೇವಾಂಶ ಹೆಚ್ಚಿತ್ತು. ಹೊಲದ ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹಗೊಂಡಿದ್ದರಿಂದ ಉಳುಮೆಗೆ ಸಾಧ್ಯವಾಗಿರಲಿಲ್ಲ. ಭಾನುವಾರದಿಂದ ಹೆಗ್ಗೋಠಾರ ಭಾಗದಲ್ಲಿ ಉಳುಮೆ ನಡೆಯುತ್ತಿದೆ’ ಎಂದು ಟ್ರ್ಯಾಕ್ಟರ್ ಚಾಲಕ ರವಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>*<br /> ಸರ್ಕಾರ ಇನ್ನೂ ಬಿತ್ತನೆಬೀಜದ ದರ ನಿಗದಿಪಡಿಸಿಲ್ಲ. ವಾರದೊಳಗೆ ಆದೇಶ ಬರಲಿದೆ. ಆ ನಂತರ ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆಬೀಜ ವಿತರಣೆಗೆ ಕ್ರಮವಹಿಸಲಾಗುವುದು.<br /> <em><strong>-ಜಿ.ಎಚ್. ಯೋಗೇಶ್,<br /> ಉಪ ನಿರ್ದೇಶಕ, ಕೃಷಿ ಇಲಾಖೆ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>