<p><strong>ನವದೆಹಲಿ:</strong> ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೆ ಸಂಬಂಧಿಸಿದ ನಾಲ್ಕು ಪೂರಕ ಕರಡು ಮಸೂದೆಗಳಿಗೆ ಕೇಂದ್ರ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ.<br /> <br /> ಕೇಂದ್ರ ಸರ್ಕಾರದ ಜಿಎಸ್ಟಿ, ಸಮಗ್ರ ಜಿಎಸ್ಟಿ, ಕೇಂದ್ರಾಡಳಿತ ಪ್ರದೇಶ ಜಿಎಸ್ಟಿ ಮತ್ತು ರಾಜ್ಯಗಳಿಗೆ ಪರಿಹಾರ ನೀಡುವ ಕರಡು ಮಸೂದೆಗಳಿಗೆ ಈಗ ಸಂಪುಟದ ಒಪ್ಪಿಗೆ ದೊರೆತಿರುವುದರಿಂದ, ಹೊಸ ತೆರಿಗೆ ವ್ಯವಸ್ಥೆ ಜಾರಿ ನಿಟ್ಟಿನಲ್ಲಿ ಇನ್ನೊಂದು ಪ್ರಮುಖ ಹೆಜ್ಜೆ ಇರಿಸಿದಂತಾಗಿದೆ.<br /> <br /> ದೇಶದ ಅತಿದೊಡ್ಡ ತೆರಿಗೆ ಸುಧಾರಣಾ ಕ್ರಮವನ್ನು ಜುಲೈ 1ರಿಂದ ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.<br /> ಕಳೆದ ವಾರ ನಡೆದಿದ್ದ ಜಿಎಸ್ಟಿ ಮಂಡಳಿಯ 12ನೇ ಸಭೆಯಲ್ಲಿ ಈ ನಾಲ್ಕೂ ಪೂರಕ ಮಸೂದೆಗಳನ್ನು ಚರ್ಚಿಸಿ ಅನುಮೋದಿಸಲಾಗಿತ್ತು.<br /> <br /> ‘ಸದ್ಯಕ್ಕೆ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿಯೇ ಈ ನಾಲ್ಕೂ ಕರಡು ಮಸೂದೆಗಳನ್ನು ಮಂಡಿಸಿ ಅನುಮೋದನೆ ಪಡೆಯಲು ಸರ್ಕಾರ ಉದ್ದೇಶಿಸಿದೆ’ ಎಂದು ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ಹೇಳಿದ್ದಾರೆ.<br /> <br /> ‘ಸಿಜಿಎಸ್ಟಿ’ಯು, ರಾಜ್ಯದ ಒಳಗೆ ನಡೆಯುವ ಸರಕು ಮತ್ತು ಸೇವೆಗಳ ಪೂರೈಕೆ ಮೇಲೆ ಕೇಂದ್ರ ಸರ್ಕಾರ ವಿಧಿಸುವ ಮತ್ತು ವಸೂಲಿ ಮಾಡುವ ತೆರಿಗೆಯ ನಿಯಮಾವಳಿಗೆ ಸಂಬಂಧಿಸಿದೆ. <br /> <br /> ಸರಕುಗಳ ಅಂತರರಾಜ್ಯ ಪೂರೈಕೆಗೆ ಸಮಗ್ರ ಜಿಎಸ್ಟಿ (ಐಜಿಎಸ್ಟಿ), ‘ಯುಟಿಜಿಎಸ್ಟಿ’ಯು ಕೇಂದ್ರಾಡಳಿತ ಪ್ರದೇಶಗಳಿಗೆ ಅನ್ವಯವಾಗಲಿದೆ. ಪರಿಹಾರ ಮಸೂದೆಯು, ಜಿಎಸ್ಟಿ ಜಾರಿಯಿಂದ ರಾಜ್ಯಗಳಿಗೆ ಆಗುವ ನಷ್ಟವನ್ನು 5 ವರ್ಷಗಳವರೆಗೆ ತುಂಬಿಕೊಡುವುದಕ್ಕೆ ಸಂಬಂಧಿಸಿದೆ.<br /> <br /> ‘ಒಂದು ದೇಶ, ಒಂದು ತೆರಿಗೆ’ ವ್ಯವಸ್ಥೆ ಜಾರಿಗೆ ತರಲು ಈಗ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳು ಪೂರಕ ಕರಡು ಮಸೂದೆಗಳನ್ನು ಅಂಗೀಕರಿಸುವುದೊಂದೇ ಬಾಕಿ ಉಳಿದಂತಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಜಾರಿಗೆ ಸಂಬಂಧಿಸಿದ ನಾಲ್ಕು ಪೂರಕ ಕರಡು ಮಸೂದೆಗಳಿಗೆ ಕೇಂದ್ರ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ.<br /> <br /> ಕೇಂದ್ರ ಸರ್ಕಾರದ ಜಿಎಸ್ಟಿ, ಸಮಗ್ರ ಜಿಎಸ್ಟಿ, ಕೇಂದ್ರಾಡಳಿತ ಪ್ರದೇಶ ಜಿಎಸ್ಟಿ ಮತ್ತು ರಾಜ್ಯಗಳಿಗೆ ಪರಿಹಾರ ನೀಡುವ ಕರಡು ಮಸೂದೆಗಳಿಗೆ ಈಗ ಸಂಪುಟದ ಒಪ್ಪಿಗೆ ದೊರೆತಿರುವುದರಿಂದ, ಹೊಸ ತೆರಿಗೆ ವ್ಯವಸ್ಥೆ ಜಾರಿ ನಿಟ್ಟಿನಲ್ಲಿ ಇನ್ನೊಂದು ಪ್ರಮುಖ ಹೆಜ್ಜೆ ಇರಿಸಿದಂತಾಗಿದೆ.<br /> <br /> ದೇಶದ ಅತಿದೊಡ್ಡ ತೆರಿಗೆ ಸುಧಾರಣಾ ಕ್ರಮವನ್ನು ಜುಲೈ 1ರಿಂದ ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.<br /> ಕಳೆದ ವಾರ ನಡೆದಿದ್ದ ಜಿಎಸ್ಟಿ ಮಂಡಳಿಯ 12ನೇ ಸಭೆಯಲ್ಲಿ ಈ ನಾಲ್ಕೂ ಪೂರಕ ಮಸೂದೆಗಳನ್ನು ಚರ್ಚಿಸಿ ಅನುಮೋದಿಸಲಾಗಿತ್ತು.<br /> <br /> ‘ಸದ್ಯಕ್ಕೆ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿಯೇ ಈ ನಾಲ್ಕೂ ಕರಡು ಮಸೂದೆಗಳನ್ನು ಮಂಡಿಸಿ ಅನುಮೋದನೆ ಪಡೆಯಲು ಸರ್ಕಾರ ಉದ್ದೇಶಿಸಿದೆ’ ಎಂದು ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ಹೇಳಿದ್ದಾರೆ.<br /> <br /> ‘ಸಿಜಿಎಸ್ಟಿ’ಯು, ರಾಜ್ಯದ ಒಳಗೆ ನಡೆಯುವ ಸರಕು ಮತ್ತು ಸೇವೆಗಳ ಪೂರೈಕೆ ಮೇಲೆ ಕೇಂದ್ರ ಸರ್ಕಾರ ವಿಧಿಸುವ ಮತ್ತು ವಸೂಲಿ ಮಾಡುವ ತೆರಿಗೆಯ ನಿಯಮಾವಳಿಗೆ ಸಂಬಂಧಿಸಿದೆ. <br /> <br /> ಸರಕುಗಳ ಅಂತರರಾಜ್ಯ ಪೂರೈಕೆಗೆ ಸಮಗ್ರ ಜಿಎಸ್ಟಿ (ಐಜಿಎಸ್ಟಿ), ‘ಯುಟಿಜಿಎಸ್ಟಿ’ಯು ಕೇಂದ್ರಾಡಳಿತ ಪ್ರದೇಶಗಳಿಗೆ ಅನ್ವಯವಾಗಲಿದೆ. ಪರಿಹಾರ ಮಸೂದೆಯು, ಜಿಎಸ್ಟಿ ಜಾರಿಯಿಂದ ರಾಜ್ಯಗಳಿಗೆ ಆಗುವ ನಷ್ಟವನ್ನು 5 ವರ್ಷಗಳವರೆಗೆ ತುಂಬಿಕೊಡುವುದಕ್ಕೆ ಸಂಬಂಧಿಸಿದೆ.<br /> <br /> ‘ಒಂದು ದೇಶ, ಒಂದು ತೆರಿಗೆ’ ವ್ಯವಸ್ಥೆ ಜಾರಿಗೆ ತರಲು ಈಗ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳು ಪೂರಕ ಕರಡು ಮಸೂದೆಗಳನ್ನು ಅಂಗೀಕರಿಸುವುದೊಂದೇ ಬಾಕಿ ಉಳಿದಂತಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>