<div> ಬೇಸಿಗೆಯ ಬಿಸಿ ಏರುತ್ತಿರುವಂತೆ ನೀರಿನ ಸಮಸ್ಯೆಯ ತೀವ್ರತೆಯೂ ಹೆಚ್ಚಾಗುತ್ತಿದೆ. ರಾಜ್ಯದ ವಿವಿಧೆಡೆಗಳಲ್ಲಿ ನೀರಿಗಾಗಿ ಅನುಭವಿಸುತ್ತಿರುವ ಸಂಕಷ್ಟಗಳು ವರದಿಯಾಗುತ್ತಲೇ ಇವೆ.<br /> <br /> ದೂರದಿಂದ ಕೊಡ ನೀರು ಹೊತ್ತುತರುವುದು, ತಳ್ಳುಗಾಡಿಗಳಲ್ಲಿ ನೀರನ್ನು ಒಯ್ಯುವುದು ಅಥವಾ ನೀರಿಗಾಗಿ ಕೊಳವೆ ಬಾವಿ, ನೀರಿನ ಟ್ಯಾಂಕರ್ ಮುಂದೆ ಮಹಿಳೆಯರು ಸಾಲುಗಟ್ಟಿ ನಿಲ್ಲುವ ದೃಶ್ಯಗಳು ಮಾಮೂಲಾಗಿವೆ. ಭಾರತದಲ್ಲಿ ಈಗಲೂ ಸುಮಾರು 7.6 ಕೋಟಿ ಜನರಿಗೆ ಸುರಕ್ಷಿತವಾದ ಕುಡಿಯುವ ನೀರಿನ ಲಭ್ಯತೆ ಇಲ್ಲ. <div> </div><div> ಕಾರ್ಖಾನೆಗಳು ಹೊರಬಿಡುವ ತ್ಯಾಜ್ಯ ಸೇರಿದಂತೆ ಹಲವು ಕಾರಣಗಳಿಗಾಗಿ ಮಲಿನಗೊಳ್ಳುತ್ತಿರುವ ನದಿಗಳಿಂದಾಗಿ ನೀರಿನ ಸಮಸ್ಯೆ ಮತ್ತಷ್ಟು ದೊಡ್ಡದಾಗುತ್ತಿದೆ. ಇಂತಹ ಸಂದರ್ಭದಲ್ಲಿ ಇಂದು ಈ ಬಾರಿಯ ವಿಶ್ವ ಜಲ ದಿನವನ್ನು ನಾವು ಆಚರಿಸುತ್ತಿದ್ದೇವೆ.</div><div> </div><div> ‘ನೀರನ್ನು ಏಕೆ ಪೋಲು ಮಾಡಬೇಕು’ ಎಂಬುದು ಈ ಬಾರಿಯ ಜಲ ದಿನದ ಘೋಷವಾಕ್ಯ. ಇಂದು ನಾವು ಅನುಭವಿಸುತ್ತಿರುವ ಜಲ ಬಿಕ್ಕಟ್ಟನ್ನು ಗಮನಿಸಿದರೆ ಈ ಘೋಷವಾಕ್ಯದ ಮಹತ್ವ ಅರಿವಾಗುತ್ತದೆ. ನಮ್ಮ ಮನೆ, ನಗರ, ಉದ್ಯಮ ಹಾಗೂ ಕೃಷಿ ಚಟುವಟಿಕೆಗಳಲ್ಲಿ ಬಳಕೆಯಾಗಿ ಹರಿದು ಹೋಗುವ ತ್ಯಾಜ್ಯ ನೀರಿನ ಪ್ರಮಾಣ ದೊಡ್ಡದು.</div><div> </div><div> ಈ ನೀರು ಸಂಸ್ಕರಣಗೊಂಡು ಮರುಬಳಕೆಯಾಗದೆ ವ್ಯರ್ಥವಾಗುತ್ತಿದೆ. ಜೊತೆಗೆ ಮಾಲಿನ್ಯವನ್ನೂ ಸೃಷ್ಟಿಸುತ್ತಿದೆ. ಆದರೆ ತ್ಯಾಜ್ಯ ನೀರನ್ನು ಕಡಿಮೆ ಮಾಡುವುದಲ್ಲದೆ ಅದನ್ನು ಸುರಕ್ಷಿತವಾಗಿ ಸಂಸ್ಕರಿಸಿ ಮರುಬಳಕೆ ಮಾಡಲು ಅವಕಾಶವಿದೆ. ಈ ಬಗ್ಗೆ ಚಿಂತಿಸಲು ಇದು ಸಕಾಲ. </div><div> </div><div> ಭಾರತದ ಆರ್ಥಿಕತೆ ಕೃಷಿಯನ್ನೇ ದೊಡ್ಡದಾಗಿ ಅವಲಂಬಿಸಿದೆ. ಆದರೆ ನೀರಿನ ಕೊರತೆ ಹಾಗೂ ಪದೇಪದೇ ರಾಷ್ಟ್ರವನ್ನು ಕಾಡುತ್ತಿರುವ ಬರದಿಂದ ಆರ್ಥಿಕ ಪ್ರಗತಿ ಮೇಲಾಗುವ ಪರಿಣಾಮ ದೊಡ್ಡದು. ಇಂತಹ ಸಂದರ್ಭದಲ್ಲಿ ನೀರಿನ ಪೋಲು ತಡೆಯುವ ಬಗ್ಗೆ ವಿಶೇಷ ಗಮನ ಹರಿಸುವುದು ಅಗತ್ಯ.</div><div> </div><div> ಅದರಲ್ಲೂ ನಗರಗಳಲ್ಲಿ ವಾಸಿಸುವ ಜನರ ಜೀವನಶೈಲಿಯಿಂದ ಆಗುತ್ತಿರುವ ನೀರಿನ ಪೋಲು ಈಗಾಗಲೇ ನಮಗೆ ದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಜನಜಾಗೃತಿಯಾಗಬೇಕು. ಮುಂದೊದಗಬಹುದಾದ ನೀರಿನ ಸಮಸ್ಯೆಯ ಅಗಾಧತೆಯ ಬಗ್ಗೆ ಅರಿವು ಮೂಡಿಸುವುದು ಇಂದಿನ ತುರ್ತು.</div><div> </div><div> ವಿಶ್ವದ ಒಟ್ಟು ಜನಸಂಖ್ಯೆಯಲ್ಲಿ ಶೇ 18ರಷ್ಟು ಮಂದಿ ಭಾರತದಲ್ಲಿದ್ದಾರೆ. ಆದರೆ ಜಗತ್ತಿನಲ್ಲಿ ಒಟ್ಟು ಲಭ್ಯವಿರುವ ಜಲ ಸಂಪನ್ಮೂಲಗಳಲ್ಲಿ ಭಾರತ ಹೊಂದಿರುವ ಪಾಲು ಕೇವಲ ಶೇ 4. ಇದನ್ನು ನಾವು ಅರಿತುಕೊಳ್ಳಬೇಕು.</div><div> </div><div> ಹೀಗಾಗಿ ನೀರಿನ ಪ್ರತಿ ಹನಿಯೂ ಎಷ್ಟು ಮುಖ್ಯ ಎಂಬುದು ಅರಿವಾಗಬೇಕು. ಭಾರತದ ಬಹು ಭಾಗಗಳಲ್ಲಿ 2040ರೊಳಗೆ ಕುಡಿಯುವ ನೀರಿನ ತೀವ್ರ ಕೊರತೆ ಎದುರಾಗಲಿದೆ ಎಂದು ಇತ್ತೀಚಿನ ಅಧ್ಯಯನ ಹೇಳಿದೆ.</div><div> <br /> 2030 ಹಾಗೂ 2040ರ ನಡುವೆ ವಿಶ್ವದ ಅನೇಕ ಭಾಗಗಳು ನೀರಿನ ಅಭಾವ ಎದುರಿಸಲಿವೆ. ಈ ಪೈಕಿ ಭಾರತವೂ ತೀವ್ರ ಸಂಕಷ್ಟಕ್ಕೆ ಸಿಲುಕಲಿದೆ. ಇದನ್ನು ನಿರ್ವಹಿಸಲು ನಾವು ಸಜ್ಜುಗೊಳ್ಳಬೇಕಿದೆ.</div><div> </div><div> ಕಳೆದ ವರ್ಷ ತೀವ್ರ ಬೇಸಿಗೆಯಿಂದ ನೆರೆಯ ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ರಾಷ್ಟ್ರದ 13 ರಾಜ್ಯಗಳ ಸುಮಾರು 300 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಕೊರತೆ ಉಂಟಾಗಿತ್ತು. ಮಹಾರಾಷ್ಟ್ರದ ಲಾತೂರ್ಗೆ ಕುಡಿಯುವ ನೀರನ್ನು ರೈಲುಗಳ ಮೂಲಕ ಕಳಿಸಿದ ವಿದ್ಯಮಾನವೂ ನಡೆಯಿತು ಎಂಬುದನ್ನು ನೆನಪಿಸಿಕೊಳ್ಳಬೇಕು. </div><div> </div><div> ನದಿ ನೀರಿನ ಸೂಕ್ತ ಸಂಗ್ರಹ ಹಾಗೂ ಬಳಕೆಗೆ ಸಮರ್ಪಕ ವ್ಯವಸ್ಥೆ ಇಲ್ಲದಿರುವುದರಿಂದಲೂ ಶುದ್ಧ ನೀರು ಪೋಲಾಗುತ್ತಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಬೇಕು. ಭಾರತದಲ್ಲಿ ಅನೇಕ ಪ್ರಮುಖ ನದಿಗಳು ಹರಿಯುತ್ತವೆ.</div><div> </div><div> ಜೊತೆಗೆ ಇಲ್ಲಿ ವಾರ್ಷಿಕ ಸರಾಸರಿ 1,170 ಮಿಲಿಮೀಟರ್ ಮಳೆ ಬೀಳುತ್ತದೆ. ಹೀಗಿದ್ದೂ ಈ ಮಳೆ ನೀರಿನ ಸಂಗ್ರಹ, ಸಂರಕ್ಷಣೆ ಹಾಗೂ ಮರುಬಳಕೆಯ ಬಗ್ಗೆ ನಮ್ಮಲ್ಲಿ ಹೆಚ್ಚಿನ ಅರಿವು ಇಲ್ಲ. ಜೊತೆಗೆ ಈ ಕುರಿತಾದ ಸೂಕ್ಷ್ಮತೆಯೂ ಇಲ್ಲ. </div><div> </div><div> ಬೆಂಗಳೂರು ನಗರದಲ್ಲಿ ನಿರ್ದಿಷ್ಟ ಅಳತೆಯ ನಿವೇಶನದಲ್ಲಿ ಕಟ್ಟಿದ ಮನೆಗಳಲ್ಲಿ ಮಳೆ ನೀರು ಸಂಗ್ರಹಿಸಬೇಕೆಂದು ರಾಜ್ಯ ಸರ್ಕಾರ ನೀತಿ ರೂಪಿಸಿದೆ. ಆದರೆ ಈ ನೀತಿ ಎಷ್ಟರಮಟ್ಟಿಗೆ ಅನುಷ್ಠಾನವಾಗಿದೆ ಎಂಬುದು ಪ್ರಶ್ನೆ.</div><div> </div><div> ನೀರು ಪೋಲಾಗದಂತೆ ಸಂಗ್ರಹಿಸಿಟ್ಟುಕೊಳ್ಳಲು ಮೂಲ ಸೌಕರ್ಯಗಳನ್ನು ಮೊದಲು ಅಭಿವೃದ್ಧಿಪಡಿಸಬೇಕು. ಇದಕ್ಕೆ ತಂತ್ರಜ್ಞಾನವನ್ನು, ಲಭ್ಯವಿರುವ ಸ್ಥಳೀಯ ಮಾದರಿಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕ್ರಿಯಾಶೀಲರಾಗಲು ಸಂಕಲ್ಪ ತೊಡೋಣ.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div> ಬೇಸಿಗೆಯ ಬಿಸಿ ಏರುತ್ತಿರುವಂತೆ ನೀರಿನ ಸಮಸ್ಯೆಯ ತೀವ್ರತೆಯೂ ಹೆಚ್ಚಾಗುತ್ತಿದೆ. ರಾಜ್ಯದ ವಿವಿಧೆಡೆಗಳಲ್ಲಿ ನೀರಿಗಾಗಿ ಅನುಭವಿಸುತ್ತಿರುವ ಸಂಕಷ್ಟಗಳು ವರದಿಯಾಗುತ್ತಲೇ ಇವೆ.<br /> <br /> ದೂರದಿಂದ ಕೊಡ ನೀರು ಹೊತ್ತುತರುವುದು, ತಳ್ಳುಗಾಡಿಗಳಲ್ಲಿ ನೀರನ್ನು ಒಯ್ಯುವುದು ಅಥವಾ ನೀರಿಗಾಗಿ ಕೊಳವೆ ಬಾವಿ, ನೀರಿನ ಟ್ಯಾಂಕರ್ ಮುಂದೆ ಮಹಿಳೆಯರು ಸಾಲುಗಟ್ಟಿ ನಿಲ್ಲುವ ದೃಶ್ಯಗಳು ಮಾಮೂಲಾಗಿವೆ. ಭಾರತದಲ್ಲಿ ಈಗಲೂ ಸುಮಾರು 7.6 ಕೋಟಿ ಜನರಿಗೆ ಸುರಕ್ಷಿತವಾದ ಕುಡಿಯುವ ನೀರಿನ ಲಭ್ಯತೆ ಇಲ್ಲ. <div> </div><div> ಕಾರ್ಖಾನೆಗಳು ಹೊರಬಿಡುವ ತ್ಯಾಜ್ಯ ಸೇರಿದಂತೆ ಹಲವು ಕಾರಣಗಳಿಗಾಗಿ ಮಲಿನಗೊಳ್ಳುತ್ತಿರುವ ನದಿಗಳಿಂದಾಗಿ ನೀರಿನ ಸಮಸ್ಯೆ ಮತ್ತಷ್ಟು ದೊಡ್ಡದಾಗುತ್ತಿದೆ. ಇಂತಹ ಸಂದರ್ಭದಲ್ಲಿ ಇಂದು ಈ ಬಾರಿಯ ವಿಶ್ವ ಜಲ ದಿನವನ್ನು ನಾವು ಆಚರಿಸುತ್ತಿದ್ದೇವೆ.</div><div> </div><div> ‘ನೀರನ್ನು ಏಕೆ ಪೋಲು ಮಾಡಬೇಕು’ ಎಂಬುದು ಈ ಬಾರಿಯ ಜಲ ದಿನದ ಘೋಷವಾಕ್ಯ. ಇಂದು ನಾವು ಅನುಭವಿಸುತ್ತಿರುವ ಜಲ ಬಿಕ್ಕಟ್ಟನ್ನು ಗಮನಿಸಿದರೆ ಈ ಘೋಷವಾಕ್ಯದ ಮಹತ್ವ ಅರಿವಾಗುತ್ತದೆ. ನಮ್ಮ ಮನೆ, ನಗರ, ಉದ್ಯಮ ಹಾಗೂ ಕೃಷಿ ಚಟುವಟಿಕೆಗಳಲ್ಲಿ ಬಳಕೆಯಾಗಿ ಹರಿದು ಹೋಗುವ ತ್ಯಾಜ್ಯ ನೀರಿನ ಪ್ರಮಾಣ ದೊಡ್ಡದು.</div><div> </div><div> ಈ ನೀರು ಸಂಸ್ಕರಣಗೊಂಡು ಮರುಬಳಕೆಯಾಗದೆ ವ್ಯರ್ಥವಾಗುತ್ತಿದೆ. ಜೊತೆಗೆ ಮಾಲಿನ್ಯವನ್ನೂ ಸೃಷ್ಟಿಸುತ್ತಿದೆ. ಆದರೆ ತ್ಯಾಜ್ಯ ನೀರನ್ನು ಕಡಿಮೆ ಮಾಡುವುದಲ್ಲದೆ ಅದನ್ನು ಸುರಕ್ಷಿತವಾಗಿ ಸಂಸ್ಕರಿಸಿ ಮರುಬಳಕೆ ಮಾಡಲು ಅವಕಾಶವಿದೆ. ಈ ಬಗ್ಗೆ ಚಿಂತಿಸಲು ಇದು ಸಕಾಲ. </div><div> </div><div> ಭಾರತದ ಆರ್ಥಿಕತೆ ಕೃಷಿಯನ್ನೇ ದೊಡ್ಡದಾಗಿ ಅವಲಂಬಿಸಿದೆ. ಆದರೆ ನೀರಿನ ಕೊರತೆ ಹಾಗೂ ಪದೇಪದೇ ರಾಷ್ಟ್ರವನ್ನು ಕಾಡುತ್ತಿರುವ ಬರದಿಂದ ಆರ್ಥಿಕ ಪ್ರಗತಿ ಮೇಲಾಗುವ ಪರಿಣಾಮ ದೊಡ್ಡದು. ಇಂತಹ ಸಂದರ್ಭದಲ್ಲಿ ನೀರಿನ ಪೋಲು ತಡೆಯುವ ಬಗ್ಗೆ ವಿಶೇಷ ಗಮನ ಹರಿಸುವುದು ಅಗತ್ಯ.</div><div> </div><div> ಅದರಲ್ಲೂ ನಗರಗಳಲ್ಲಿ ವಾಸಿಸುವ ಜನರ ಜೀವನಶೈಲಿಯಿಂದ ಆಗುತ್ತಿರುವ ನೀರಿನ ಪೋಲು ಈಗಾಗಲೇ ನಮಗೆ ದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಜನಜಾಗೃತಿಯಾಗಬೇಕು. ಮುಂದೊದಗಬಹುದಾದ ನೀರಿನ ಸಮಸ್ಯೆಯ ಅಗಾಧತೆಯ ಬಗ್ಗೆ ಅರಿವು ಮೂಡಿಸುವುದು ಇಂದಿನ ತುರ್ತು.</div><div> </div><div> ವಿಶ್ವದ ಒಟ್ಟು ಜನಸಂಖ್ಯೆಯಲ್ಲಿ ಶೇ 18ರಷ್ಟು ಮಂದಿ ಭಾರತದಲ್ಲಿದ್ದಾರೆ. ಆದರೆ ಜಗತ್ತಿನಲ್ಲಿ ಒಟ್ಟು ಲಭ್ಯವಿರುವ ಜಲ ಸಂಪನ್ಮೂಲಗಳಲ್ಲಿ ಭಾರತ ಹೊಂದಿರುವ ಪಾಲು ಕೇವಲ ಶೇ 4. ಇದನ್ನು ನಾವು ಅರಿತುಕೊಳ್ಳಬೇಕು.</div><div> </div><div> ಹೀಗಾಗಿ ನೀರಿನ ಪ್ರತಿ ಹನಿಯೂ ಎಷ್ಟು ಮುಖ್ಯ ಎಂಬುದು ಅರಿವಾಗಬೇಕು. ಭಾರತದ ಬಹು ಭಾಗಗಳಲ್ಲಿ 2040ರೊಳಗೆ ಕುಡಿಯುವ ನೀರಿನ ತೀವ್ರ ಕೊರತೆ ಎದುರಾಗಲಿದೆ ಎಂದು ಇತ್ತೀಚಿನ ಅಧ್ಯಯನ ಹೇಳಿದೆ.</div><div> <br /> 2030 ಹಾಗೂ 2040ರ ನಡುವೆ ವಿಶ್ವದ ಅನೇಕ ಭಾಗಗಳು ನೀರಿನ ಅಭಾವ ಎದುರಿಸಲಿವೆ. ಈ ಪೈಕಿ ಭಾರತವೂ ತೀವ್ರ ಸಂಕಷ್ಟಕ್ಕೆ ಸಿಲುಕಲಿದೆ. ಇದನ್ನು ನಿರ್ವಹಿಸಲು ನಾವು ಸಜ್ಜುಗೊಳ್ಳಬೇಕಿದೆ.</div><div> </div><div> ಕಳೆದ ವರ್ಷ ತೀವ್ರ ಬೇಸಿಗೆಯಿಂದ ನೆರೆಯ ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ರಾಷ್ಟ್ರದ 13 ರಾಜ್ಯಗಳ ಸುಮಾರು 300 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಕೊರತೆ ಉಂಟಾಗಿತ್ತು. ಮಹಾರಾಷ್ಟ್ರದ ಲಾತೂರ್ಗೆ ಕುಡಿಯುವ ನೀರನ್ನು ರೈಲುಗಳ ಮೂಲಕ ಕಳಿಸಿದ ವಿದ್ಯಮಾನವೂ ನಡೆಯಿತು ಎಂಬುದನ್ನು ನೆನಪಿಸಿಕೊಳ್ಳಬೇಕು. </div><div> </div><div> ನದಿ ನೀರಿನ ಸೂಕ್ತ ಸಂಗ್ರಹ ಹಾಗೂ ಬಳಕೆಗೆ ಸಮರ್ಪಕ ವ್ಯವಸ್ಥೆ ಇಲ್ಲದಿರುವುದರಿಂದಲೂ ಶುದ್ಧ ನೀರು ಪೋಲಾಗುತ್ತಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಬೇಕು. ಭಾರತದಲ್ಲಿ ಅನೇಕ ಪ್ರಮುಖ ನದಿಗಳು ಹರಿಯುತ್ತವೆ.</div><div> </div><div> ಜೊತೆಗೆ ಇಲ್ಲಿ ವಾರ್ಷಿಕ ಸರಾಸರಿ 1,170 ಮಿಲಿಮೀಟರ್ ಮಳೆ ಬೀಳುತ್ತದೆ. ಹೀಗಿದ್ದೂ ಈ ಮಳೆ ನೀರಿನ ಸಂಗ್ರಹ, ಸಂರಕ್ಷಣೆ ಹಾಗೂ ಮರುಬಳಕೆಯ ಬಗ್ಗೆ ನಮ್ಮಲ್ಲಿ ಹೆಚ್ಚಿನ ಅರಿವು ಇಲ್ಲ. ಜೊತೆಗೆ ಈ ಕುರಿತಾದ ಸೂಕ್ಷ್ಮತೆಯೂ ಇಲ್ಲ. </div><div> </div><div> ಬೆಂಗಳೂರು ನಗರದಲ್ಲಿ ನಿರ್ದಿಷ್ಟ ಅಳತೆಯ ನಿವೇಶನದಲ್ಲಿ ಕಟ್ಟಿದ ಮನೆಗಳಲ್ಲಿ ಮಳೆ ನೀರು ಸಂಗ್ರಹಿಸಬೇಕೆಂದು ರಾಜ್ಯ ಸರ್ಕಾರ ನೀತಿ ರೂಪಿಸಿದೆ. ಆದರೆ ಈ ನೀತಿ ಎಷ್ಟರಮಟ್ಟಿಗೆ ಅನುಷ್ಠಾನವಾಗಿದೆ ಎಂಬುದು ಪ್ರಶ್ನೆ.</div><div> </div><div> ನೀರು ಪೋಲಾಗದಂತೆ ಸಂಗ್ರಹಿಸಿಟ್ಟುಕೊಳ್ಳಲು ಮೂಲ ಸೌಕರ್ಯಗಳನ್ನು ಮೊದಲು ಅಭಿವೃದ್ಧಿಪಡಿಸಬೇಕು. ಇದಕ್ಕೆ ತಂತ್ರಜ್ಞಾನವನ್ನು, ಲಭ್ಯವಿರುವ ಸ್ಥಳೀಯ ಮಾದರಿಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕ್ರಿಯಾಶೀಲರಾಗಲು ಸಂಕಲ್ಪ ತೊಡೋಣ.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>