<p><strong>ನವದೆಹಲಿ:</strong> ‘2020ರ ಕಾಮನ್ವೆಲ್ತ್ ಕ್ರೀಡಾಕೂಟದ ಆತಿಥ್ಯಕ್ಕೆ ಭಾರತ ಬಿಡ್ ಸಲ್ಲಿಸುವುದಿಲ್ಲ’ ಎಂದು ಭಾರತ ಒಲಿಂಪಿಕ್ ಸಂಸ್ಥೆಯ (ಐಒಸಿ) ಅಧ್ಯಕ್ಷ ಎನ್. ರಾಮಚಂದ್ರನ್ ತಿಳಿಸಿದ್ದಾರೆ.</p>.<p>‘ಕೂಟದ ಆತಿಥ್ಯ ಪಡೆಯಲು ಈಗಾಗಲೇ ಸಾಕಷ್ಟು ದೇಶಗಳ ನಡುವೆ ಪೈಪೋಟಿ ಶುರುವಾಗಿದೆ. ಜೊತೆಗೆ ಸಮಯವೂ ಮೀರಿದೆ.<br /> ದಕ್ಷಿಣ ಆಫ್ರಿಕಾ , ಆತಿಥ್ಯದಿಂದ ಹಿಂದೆ ಸರಿದಿರುವುದಾಗಿ ಹೇಳಿದೆಯಾ ದರೂ ಅದು ಇನ್ನೂ ಅಂತಿಮವಾಗಿಲ್ಲ. ಕಾಮನ್ವೆಲ್ತ್ ಕ್ರೀಡಾ ಕೂಟದ ಸಮಿತಿಯು ದಕ್ಷಿಣ ಆಫ್ರಿಕಾದ ಜೊತೆ ನಿರಂತರ ಸಂಪರ್ಕದಲ್ಲಿದ್ದು ಆ ದೇಶದ ಮನವೊಲಿಸುವ ಪ್ರಯತ್ನ ಮಾಡುತ್ತಿದೆ’ ಎಂದು ಅವರು ಹೇಳಿದ್ದಾರೆ.</p>.<p>‘ಇಂಗ್ಲೆಂಡ್ ಕೂಡ ಆತಿಥ್ಯ ಪಡೆಯಲು ಮುಂದೆ ಬಂದಿದ್ದು ಲಂಡನ್, ಮ್ಯಾಂಚೆಸ್ಟರ್ ಮತ್ತು ಬರ್ಮಿಂಗ್ ಹ್ಯಾಮ್ನಲ್ಲಿ ಕೂಟ ಆಯೋಜಿಸಲು ಸಿದ್ಧವಿರುವುದಾಗಿ ಹೇಳಿದೆ. ಈ ಹಂತದಲ್ಲಿ ನಾವು ಬಿಡ್ ಸಲ್ಲಿಸುವುದು ಸರಿ ಅನಿಸುವುದಿಲ್ಲ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.<br /> ‘ಸ್ಯಾಫ್ ಕ್ರೀಡಾಕೂಟವನ್ನು ನಾವು ಕೇವಲ 90 ದಿನಗಳಲ್ಲಿ ಆಯೋಜಿಸಿ ಯಶಸ್ಸು ಗಳಿಸಿದ್ದೆವು.</p>.<p>ಇದೇ ರೀತಿ ಮುಂದಿನ ದಿನಗಳಲ್ಲಿ ಇನ್ನೂ ಅನೇಕ ಕೂಟಗಳನ್ನು ನಡೆಸುವ ಆಲೋಚನೆ ಇದೆ’ ಎಂದೂ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘2020ರ ಕಾಮನ್ವೆಲ್ತ್ ಕ್ರೀಡಾಕೂಟದ ಆತಿಥ್ಯಕ್ಕೆ ಭಾರತ ಬಿಡ್ ಸಲ್ಲಿಸುವುದಿಲ್ಲ’ ಎಂದು ಭಾರತ ಒಲಿಂಪಿಕ್ ಸಂಸ್ಥೆಯ (ಐಒಸಿ) ಅಧ್ಯಕ್ಷ ಎನ್. ರಾಮಚಂದ್ರನ್ ತಿಳಿಸಿದ್ದಾರೆ.</p>.<p>‘ಕೂಟದ ಆತಿಥ್ಯ ಪಡೆಯಲು ಈಗಾಗಲೇ ಸಾಕಷ್ಟು ದೇಶಗಳ ನಡುವೆ ಪೈಪೋಟಿ ಶುರುವಾಗಿದೆ. ಜೊತೆಗೆ ಸಮಯವೂ ಮೀರಿದೆ.<br /> ದಕ್ಷಿಣ ಆಫ್ರಿಕಾ , ಆತಿಥ್ಯದಿಂದ ಹಿಂದೆ ಸರಿದಿರುವುದಾಗಿ ಹೇಳಿದೆಯಾ ದರೂ ಅದು ಇನ್ನೂ ಅಂತಿಮವಾಗಿಲ್ಲ. ಕಾಮನ್ವೆಲ್ತ್ ಕ್ರೀಡಾ ಕೂಟದ ಸಮಿತಿಯು ದಕ್ಷಿಣ ಆಫ್ರಿಕಾದ ಜೊತೆ ನಿರಂತರ ಸಂಪರ್ಕದಲ್ಲಿದ್ದು ಆ ದೇಶದ ಮನವೊಲಿಸುವ ಪ್ರಯತ್ನ ಮಾಡುತ್ತಿದೆ’ ಎಂದು ಅವರು ಹೇಳಿದ್ದಾರೆ.</p>.<p>‘ಇಂಗ್ಲೆಂಡ್ ಕೂಡ ಆತಿಥ್ಯ ಪಡೆಯಲು ಮುಂದೆ ಬಂದಿದ್ದು ಲಂಡನ್, ಮ್ಯಾಂಚೆಸ್ಟರ್ ಮತ್ತು ಬರ್ಮಿಂಗ್ ಹ್ಯಾಮ್ನಲ್ಲಿ ಕೂಟ ಆಯೋಜಿಸಲು ಸಿದ್ಧವಿರುವುದಾಗಿ ಹೇಳಿದೆ. ಈ ಹಂತದಲ್ಲಿ ನಾವು ಬಿಡ್ ಸಲ್ಲಿಸುವುದು ಸರಿ ಅನಿಸುವುದಿಲ್ಲ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.<br /> ‘ಸ್ಯಾಫ್ ಕ್ರೀಡಾಕೂಟವನ್ನು ನಾವು ಕೇವಲ 90 ದಿನಗಳಲ್ಲಿ ಆಯೋಜಿಸಿ ಯಶಸ್ಸು ಗಳಿಸಿದ್ದೆವು.</p>.<p>ಇದೇ ರೀತಿ ಮುಂದಿನ ದಿನಗಳಲ್ಲಿ ಇನ್ನೂ ಅನೇಕ ಕೂಟಗಳನ್ನು ನಡೆಸುವ ಆಲೋಚನೆ ಇದೆ’ ಎಂದೂ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>