<p><strong>ನವದೆಹಲಿ:</strong> ರಾಂಚಿಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಐದನೇ ಬೌಲರ್ ಕೊರತೆ ಅನುಭವಿಸಿತು ಎಂದು ಭಾರತ ತಂಡದ ಮಾಜಿ ನಾಯಕ ಸುನಿಲ್ ಗಾವಸ್ಕರ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಸೋಮವಾರ ರಾಂಚಿಯಲ್ಲಿ ಬಾರ್ಡರ್–ಗಾವಸ್ಕರ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಮೂರನೇ ಪಂದ್ಯವು ಡ್ರಾದಲ್ಲಿ ಮುಕ್ತಾಯ ವಾಗಿತ್ತು. ವಿರಾಟ್ ಕೊಹ್ಲಿ ಬಳಗದ ನಾಲ್ವರು ಬೌಲರ್ಗಳು ಕೊನೆಯ ದಿನ ನಡೆಸಿದ ಪ್ರಯತ್ನಕ್ಕೆ ಫಲ ಸಿಕ್ಕಿರಲಿಲ್ಲ. ಈ ಕುರಿತು ಮಂಗಳವಾರ ಎನ್ಡಿಟಿವಿ ಕಾರ್ಯಕ್ರಮದಲ್ಲಿ ಗಾವಸ್ಕರ್ ಮಾತನಾಡಿದ್ದಾರೆ.</p>.<p>‘ರಾಂಚಿಯಲ್ಲಿ ಉಮೇಶ್ ಯಾದವ್ ಮತ್ತು ಇಶಾಂತ್ ಶರ್ಮಾ ಅವರು ಉತ್ತಮವಾಗಿ ಬೌಲಿಂಗ್ ಮಾಡಿದರು. ಇಬ್ಬರೂ ಸ್ಪಿನ್ನರ್ಗಳೂ ಬ್ಯಾಟ್ಸ್ಮನ್ಗಳ ಮೇಲೆ ಒತ್ತಡ ಹೇರಿದ್ದರು. ಆದರೆ ಐದನೇ ಬೌಲರ್ ಇದ್ದಿದ್ದರೆ ಪಂದ್ಯ ದ ಚಿತ್ರಣ ಬದಲಾಗುತ್ತಿತ್ತು’ ಎಂದರು.</p>.<p>‘ವೃದ್ಧಿಮಾನ್ ಸಹಾ, ಅಶ್ವಿನ್ ಮತ್ತು ರವೀಂದ್ರ ಜಡೇಜ ಅವರು ಬ್ಯಾಟಿಂಗ್ನಲ್ಲಿ ಉತ್ತಮ ಕಾಣಿಕೆ ನೀಡುತ್ತಿದ್ದಾರೆ. ಆದ್ದರಿಂದ ಮುಂದಿನ ಪಂದ್ಯದಲ್ಲಿ ಆರು ಜನ ಪರಿಣತ ಬ್ಯಾಟ್ಸ್ಮನ್ ಮತ್ತು ಐವರು ಬೌಲರ್ಗಳೊಂದಿಗೆ ಆಡುವುದು ಸೂಕ್ತ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಂಚಿಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಐದನೇ ಬೌಲರ್ ಕೊರತೆ ಅನುಭವಿಸಿತು ಎಂದು ಭಾರತ ತಂಡದ ಮಾಜಿ ನಾಯಕ ಸುನಿಲ್ ಗಾವಸ್ಕರ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಸೋಮವಾರ ರಾಂಚಿಯಲ್ಲಿ ಬಾರ್ಡರ್–ಗಾವಸ್ಕರ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಮೂರನೇ ಪಂದ್ಯವು ಡ್ರಾದಲ್ಲಿ ಮುಕ್ತಾಯ ವಾಗಿತ್ತು. ವಿರಾಟ್ ಕೊಹ್ಲಿ ಬಳಗದ ನಾಲ್ವರು ಬೌಲರ್ಗಳು ಕೊನೆಯ ದಿನ ನಡೆಸಿದ ಪ್ರಯತ್ನಕ್ಕೆ ಫಲ ಸಿಕ್ಕಿರಲಿಲ್ಲ. ಈ ಕುರಿತು ಮಂಗಳವಾರ ಎನ್ಡಿಟಿವಿ ಕಾರ್ಯಕ್ರಮದಲ್ಲಿ ಗಾವಸ್ಕರ್ ಮಾತನಾಡಿದ್ದಾರೆ.</p>.<p>‘ರಾಂಚಿಯಲ್ಲಿ ಉಮೇಶ್ ಯಾದವ್ ಮತ್ತು ಇಶಾಂತ್ ಶರ್ಮಾ ಅವರು ಉತ್ತಮವಾಗಿ ಬೌಲಿಂಗ್ ಮಾಡಿದರು. ಇಬ್ಬರೂ ಸ್ಪಿನ್ನರ್ಗಳೂ ಬ್ಯಾಟ್ಸ್ಮನ್ಗಳ ಮೇಲೆ ಒತ್ತಡ ಹೇರಿದ್ದರು. ಆದರೆ ಐದನೇ ಬೌಲರ್ ಇದ್ದಿದ್ದರೆ ಪಂದ್ಯ ದ ಚಿತ್ರಣ ಬದಲಾಗುತ್ತಿತ್ತು’ ಎಂದರು.</p>.<p>‘ವೃದ್ಧಿಮಾನ್ ಸಹಾ, ಅಶ್ವಿನ್ ಮತ್ತು ರವೀಂದ್ರ ಜಡೇಜ ಅವರು ಬ್ಯಾಟಿಂಗ್ನಲ್ಲಿ ಉತ್ತಮ ಕಾಣಿಕೆ ನೀಡುತ್ತಿದ್ದಾರೆ. ಆದ್ದರಿಂದ ಮುಂದಿನ ಪಂದ್ಯದಲ್ಲಿ ಆರು ಜನ ಪರಿಣತ ಬ್ಯಾಟ್ಸ್ಮನ್ ಮತ್ತು ಐವರು ಬೌಲರ್ಗಳೊಂದಿಗೆ ಆಡುವುದು ಸೂಕ್ತ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>