<div> <strong>ನವದೆಹಲಿ: </strong>ತುಮಕೂರು, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಗಣಿಗಾರಿಕೆಗೆ ನಡೆಸಲು ಗುತ್ತಿಗೆ ಪಡೆದಿರುವ ಪ್ರತಿ ಕಂಪೆನಿಯೂ, ಅದಿರು ಮಾರಾಟದಿಂದ ಬಂದ ಶೇಕಡ 10ರಷ್ಟು ಮೊತ್ತವನ್ನು ಪರಿಸರ ಪುನಶ್ಚೇತನಕ್ಕೆ ಆರಂಭಿಸಲಾದ ನಿಗಮಕ್ಕೆ ನೀಡಬೇಕು ಎಂಬ ಆದೇಶದಲ್ಲಿ ಬದಲಾವಣೆ ತರಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.<br /> <div> ಗಣಿಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳು ಕೆಟ್ಟ ಪರಿಣಾಮಗಳನ್ನು ಬೀರುತ್ತವೆ. ಇದನ್ನು ಸರಿಪಡಿಸಬೇಕು. ಪರಿಸರಕ್ಕೆ ಆಗುವ ಹಾನಿಯನ್ನು ಕಡಿಮೆ ಮಾಡಬೇಕು ಎಂದು ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ತ್ರಿಸದಸ್ಯ ಪೀಠ ಹೇಳಿತು.</div><div> </div><div> ಸಮಾಜ ಪರಿವರ್ತನ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಅನ್ವಯ ರಾಜ್ಯ ಸರ್ಕಾರವು ‘ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ’ವನ್ನು 2014ರಲ್ಲಿ ಆರಂಭಿಸಿದೆ.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div> <strong>ನವದೆಹಲಿ: </strong>ತುಮಕೂರು, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಗಣಿಗಾರಿಕೆಗೆ ನಡೆಸಲು ಗುತ್ತಿಗೆ ಪಡೆದಿರುವ ಪ್ರತಿ ಕಂಪೆನಿಯೂ, ಅದಿರು ಮಾರಾಟದಿಂದ ಬಂದ ಶೇಕಡ 10ರಷ್ಟು ಮೊತ್ತವನ್ನು ಪರಿಸರ ಪುನಶ್ಚೇತನಕ್ಕೆ ಆರಂಭಿಸಲಾದ ನಿಗಮಕ್ಕೆ ನೀಡಬೇಕು ಎಂಬ ಆದೇಶದಲ್ಲಿ ಬದಲಾವಣೆ ತರಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.<br /> <div> ಗಣಿಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳು ಕೆಟ್ಟ ಪರಿಣಾಮಗಳನ್ನು ಬೀರುತ್ತವೆ. ಇದನ್ನು ಸರಿಪಡಿಸಬೇಕು. ಪರಿಸರಕ್ಕೆ ಆಗುವ ಹಾನಿಯನ್ನು ಕಡಿಮೆ ಮಾಡಬೇಕು ಎಂದು ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ತ್ರಿಸದಸ್ಯ ಪೀಠ ಹೇಳಿತು.</div><div> </div><div> ಸಮಾಜ ಪರಿವರ್ತನ ಸಮುದಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಅನ್ವಯ ರಾಜ್ಯ ಸರ್ಕಾರವು ‘ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ’ವನ್ನು 2014ರಲ್ಲಿ ಆರಂಭಿಸಿದೆ.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>