<div> <strong>ಬೆಂಗಳೂರು: </strong>‘ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯ ಕ್ಯಾಂಪಸ್ ಅನ್ನು ಬೆಂಗಳೂರಿನಿಂದ ರಾಮನಗರಕ್ಕೆ ಸ್ಥಳಾಂತರ ಮಾಡುವ ಸರ್ಕಾರದ ಆದೇಶಕ್ಕೆ ತಡೆ ನೀಡಬೇಕು’ ಎಂದು ಕೋರಿದ್ದ ಮನವಿಯನ್ನು ಹೈಕೋರ್ಟ್ ತಳ್ಳಿ ಹಾಕಿದೆ.<br /> <div> ವಿಶ್ವವಿದ್ಯಾಲಯ ಸ್ಥಳಾಂತರ ತಡೆ ಕೋರಿ ರಾಜ್ಯದ ಆಯುರ್ವೇದ, ನರ್ಸಿಂಗ್, ದಂತವೈದ್ಯ, ಫಾರ್ಮಸಿ ಹಾಗೂ ಅರೆ ವೈದ್ಯಕೀಯ ಕಾಲೇಜುಗಳ ಪ್ರಾಂಶುಪಾಲರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ತಿರಸ್ಕರಿಸಿದೆ.</div><div> </div><div> ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ ಅವರು, ‘ಅರ್ಜಿದಾರರು ಸರ್ಕಾರದ ಆದೇಶದಿಂದ ಬಾಧಿತರಾದವರಲ್ಲ. ಈ ಅರ್ಜಿ ಸಲ್ಲಿಕೆ ಹಿಂದೆ ದುರುದ್ದೇಶ ಅಡಗಿದೆ. ಆದ್ದರಿಂದ ಮನವಿ ಮಾನ್ಯ ಮಾಡಬಾರದು’ ಎಂಬ ಕೋರಿಕೆಯನ್ನು ಪೀಠ ಮಾನ್ಯ ಮಾಡಿತು.</div><div> </div><div> <strong>ರುದ್ರೇಶ್ ಕೊಲೆ: ಎನ್ಐಎ ತನಿಖೆ ರದ್ದು<br /> ಬೆಂಗಳೂರು:</strong> ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಖಲಿಸಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.<br /> <br /> ಈ ಸಂಬಂಧ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕದಸದಸ್ಯ ಪೀಠ ಮಂಗಳವಾರ ಪ್ರಕಟಿಸಿದ್ದು, ‘ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸರೇ ನಡೆಸಬೇಕು’ ಎಂದು ತಾಕೀತು ಮಾಡಿದೆ.<br /> <br /> ಪ್ರಕರಣದ ಐದನೇ ಆರೋಪಿಯೂ ಆದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಅಸೀಮ್ ಷರೀಫ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ಭಾಗಶಃ ಪುರಸ್ಕರಿಸಿದೆ.<br /> <br /> ಇದರಿಂದಾಗಿ ಆರೋಪಿಗಳ ವಿರುದ್ಧ ಭಯೋತ್ಪಾದನಾ ಚಟುವಟಿಕೆಗೆ ಸಂಬಂಧಿಸಿದಂತೆ ದಾಖಲಾಗಿರುವ ಅಕ್ರಮ ಕೂಟ ಕಾಯ್ದೆ–1967ರ ಅಡಿಯಲ್ಲೇ ಪ್ರಕರಣದ ತನಿಖೆ ನಡೆಯಲಿದೆ.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div> <strong>ಬೆಂಗಳೂರು: </strong>‘ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯ ಕ್ಯಾಂಪಸ್ ಅನ್ನು ಬೆಂಗಳೂರಿನಿಂದ ರಾಮನಗರಕ್ಕೆ ಸ್ಥಳಾಂತರ ಮಾಡುವ ಸರ್ಕಾರದ ಆದೇಶಕ್ಕೆ ತಡೆ ನೀಡಬೇಕು’ ಎಂದು ಕೋರಿದ್ದ ಮನವಿಯನ್ನು ಹೈಕೋರ್ಟ್ ತಳ್ಳಿ ಹಾಕಿದೆ.<br /> <div> ವಿಶ್ವವಿದ್ಯಾಲಯ ಸ್ಥಳಾಂತರ ತಡೆ ಕೋರಿ ರಾಜ್ಯದ ಆಯುರ್ವೇದ, ನರ್ಸಿಂಗ್, ದಂತವೈದ್ಯ, ಫಾರ್ಮಸಿ ಹಾಗೂ ಅರೆ ವೈದ್ಯಕೀಯ ಕಾಲೇಜುಗಳ ಪ್ರಾಂಶುಪಾಲರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ತಿರಸ್ಕರಿಸಿದೆ.</div><div> </div><div> ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ ಅವರು, ‘ಅರ್ಜಿದಾರರು ಸರ್ಕಾರದ ಆದೇಶದಿಂದ ಬಾಧಿತರಾದವರಲ್ಲ. ಈ ಅರ್ಜಿ ಸಲ್ಲಿಕೆ ಹಿಂದೆ ದುರುದ್ದೇಶ ಅಡಗಿದೆ. ಆದ್ದರಿಂದ ಮನವಿ ಮಾನ್ಯ ಮಾಡಬಾರದು’ ಎಂಬ ಕೋರಿಕೆಯನ್ನು ಪೀಠ ಮಾನ್ಯ ಮಾಡಿತು.</div><div> </div><div> <strong>ರುದ್ರೇಶ್ ಕೊಲೆ: ಎನ್ಐಎ ತನಿಖೆ ರದ್ದು<br /> ಬೆಂಗಳೂರು:</strong> ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಖಲಿಸಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.<br /> <br /> ಈ ಸಂಬಂಧ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕದಸದಸ್ಯ ಪೀಠ ಮಂಗಳವಾರ ಪ್ರಕಟಿಸಿದ್ದು, ‘ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸರೇ ನಡೆಸಬೇಕು’ ಎಂದು ತಾಕೀತು ಮಾಡಿದೆ.<br /> <br /> ಪ್ರಕರಣದ ಐದನೇ ಆರೋಪಿಯೂ ಆದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಅಸೀಮ್ ಷರೀಫ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ಭಾಗಶಃ ಪುರಸ್ಕರಿಸಿದೆ.<br /> <br /> ಇದರಿಂದಾಗಿ ಆರೋಪಿಗಳ ವಿರುದ್ಧ ಭಯೋತ್ಪಾದನಾ ಚಟುವಟಿಕೆಗೆ ಸಂಬಂಧಿಸಿದಂತೆ ದಾಖಲಾಗಿರುವ ಅಕ್ರಮ ಕೂಟ ಕಾಯ್ದೆ–1967ರ ಅಡಿಯಲ್ಲೇ ಪ್ರಕರಣದ ತನಿಖೆ ನಡೆಯಲಿದೆ.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>