<div> <strong>ಬೆಂಗಳೂರು:</strong> ಕೃಷ್ಣರಾಜಸಾಗರ (ಕೆಆರ್ಎಸ್) ಅಣೆಕಟ್ಟೆಯಲ್ಲಿ ಕಾವೇರಿ ಬತ್ತಿದರೆ ಬೆಂಗಳೂರು ಬಾಯಾರುತ್ತದೆ. ಪ್ರತಿವರ್ಷ ಬೇಸಿಗೆಯಲ್ಲಿ ನಗರದ ದಾಹ ತಣಿಸಲು ಜಲಮಂಡಳಿ ಹೆಣಗುತ್ತಿದೆ. <br /> <div> ಮಳೆಗಾಲದಲ್ಲಿ ಜಾಣತನದಿಂದ ನೀರು ಸಂಗ್ರಹಿಸಿದರೆ ಬೇಸಿಗೆಯನ್ನು ಸುಲಭವಾಗಿ ನಿಭಾಯಿಸಬಹುದು ಎಂಬುದು ಜಲತಜ್ಞರ ಪ್ರತಿಪಾದನೆ. ನಗರದಲ್ಲಿ ಮಳೆ ನೀರು ಸಂಗ್ರಹ ಕಡ್ಡಾಯ ಗೊಳಿಸಿದ್ದರೂ, ಅದಿನ್ನೂ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬಂದಿಲ್ಲ. ಈ ಬಗ್ಗೆ ಆಗೊಮ್ಮೆ ಈಗೊಮ್ಮೆ ಎಚ್ಚರಿಕೆ ನೀಡುವ ಜಲಮಂಡಳಿ ಬಳಿಕ ಮೌನಕ್ಕೆ ಶರಣಾಗುತ್ತಿದೆ. <br /> </div><div> ನಗರದಲ್ಲಿ ಮಳೆ ನೀರಿನ ಸಂಗ್ರಹ ಕುರಿತಂತೆ ಜಾಗೃತಿ ಮೂಡದ ಕಾರಣ ಪ್ರತಿವರ್ಷ 23 ಟಿಎಂಸಿ ಅಡಿಯಷ್ಟು ಪರಿಶುದ್ಧ ನೀರು ವ್ಯರ್ಥವಾಗಿ ಚರಂಡಿ ಪಾಲಾಗುತ್ತಿದೆ. ಅಷ್ಟು ನೀರನ್ನು ಸಾಗಿಸುವ ಸಾಮರ್ಥ್ಯ ಚರಂಡಿಗಳಿಗೆ ಇಲ್ಲ. ಹಾಗಾಗಿ ಪ್ರವಾಹವೂ ಉಂಟಾಗುತ್ತಿದೆ. <br /> </div><div> ಬೆಂಗಳೂರಿನಲ್ಲಿ ವರ್ಷದ 60 ಮಳೆ ದಿನಗಳಲ್ಲಿ ಸರಾಸರಿ 1 ಸಾವಿರ ಮಿಲಿ ಮೀಟರ್ ಮಳೆ ಆಗುತ್ತದೆ. 2,400 ಚದರ ಅಡಿ ಜಾಗದಲ್ಲಿ 2.06 ಲಕ್ಷ ಲೀಟರ್ ಮಳೆ ನೀರನ್ನು ಸಂಗ್ರಹಿಸಲು ಸಾಧ್ಯವಿದೆ ಎಂಬುದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆಎಸ್ಸಿಎಸ್ಟಿ) ಜಲತಜ್ಞ ಪ್ರೊ.ಎ.ಆರ್. ಶಿವಕುಮಾರ್ ಸಲಹೆ. </div><div> </div><div> ವ್ಯಕ್ತಿಯೊಬ್ಬ ದಿನಕ್ಕೆ 135 ಲೀಟರ್ ನೀರು ಉಪಯೋಗಿಸುತ್ತಾನೆ ಎಂದು ಪರಿಭಾವಿಸಿದರೆ, 4 ಜನರ ಒಂದು ಕುಟುಂಬ ವರ್ಷಕ್ಕೆ ಸರಾಸರಿ 2 ಲಕ್ಷ ಲೀಟರ್ನಷ್ಟು ನೀರನ್ನು ಬಳಸುತ್ತದೆ.</div><div> </div><div> ‘2,400 ಚದರ ಅಡಿ ಅಳತೆಯ ನಿವೇಶನದ ಮನೆಯಲ್ಲಿ ವಾಸಿಸುವ 4 ಜನರ ಸಾಧಾರಣ ಕುಟುಂಬವೊಂದಕ್ಕೆ ಬೇಕಾದಷ್ಟು ನೀರನ್ನು ಪ್ರಕೃತಿಯೇ ಧಾರಾಳವಾಗಿ ಕೊಡುತ್ತದೆ. ಸಂಗ್ರಹಿಸಿ, ಬಳಸುವ ಮನಸ್ಸು ನಮಗೆ ಬೇಕು ಅಷ್ಟೇ’ ಎಂದು ಅವರು ಹೇಳುತ್ತಾರೆ. <br /> </div><div> 19 ಲಕ್ಷ ಕಟ್ಟಡಗಳು ನಗರದಲ್ಲಿವೆ. ಮಳೆ ನೀರನ್ನು ಸಮರ್ಪಕವಾಗಿ ಸಂಗ್ರಹ ಮಾಡಿದರೆ ಇಲ್ಲಿನ ನಿವಾಸಿಗಳು ಜಲಮಂಡಳಿಯನ್ನು ಅವಲಂಬಿಸುವ ಅಗತ್ಯವೇ ಇರುವುದಿಲ್ಲ. ರಾಜಧಾನಿಯಲ್ಲಿ 29 ಸಾವಿರ ಕಟ್ಟಡಗಳಲ್ಲಿ ಮಾತ್ರ ಮಳೆ ನೀರು ಸಂಗ್ರಹ ವ್ಯವಸ್ಥೆ ಇದೆ ಎಂಬುದು ಜಲಮಂಡಳಿ ಸಮೀಕ್ಷೆಯಿಂದ ಕಂಡುಬಂದಿದೆ. </div><div> </div><div> ನೀರಿನ ಅಭಾವ ನೀಗಿಸಲು ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ಪ್ರತಿ ಮನೆ ಹಾಗೂ ಕಟ್ಟಡಗಳಲ್ಲಿ ಮಳೆ ನೀರು ಕಡ್ಡಾಯವಾಗಿ ಸಂಗ್ರಹಿಸಬೇಕು ಎಂದು ರಾಜ್ಯ ಸರ್ಕಾರ ಎಂಟು ವರ್ಷಗಳ ಹಿಂದೆ ಕಾನೂನು ರೂಪಿಸಿತ್ತು. </div><div> </div><div> 2,400 ಚದರ ಅಡಿಯ ನಿವೇಶನದ ಹಳೆಯ ಕಟ್ಟಡಗಳಿಗೆ ಹಾಗೂ ಹೊಸದಾಗಿ ನಿರ್ಮಿಸುವ 1,200 ಚದರ ಅಡಿಯ ಮತ್ತು ಅದಕ್ಕಿಂತ ಹೆಚ್ಚಿನ ವಿಸ್ತೀರ್ಣದ ಕಟ್ಟಡಗಳಲ್ಲಿ ಮಳೆ ನೀರು ವ್ಯವಸ್ಥೆಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಜಲಮಂಡಳಿ 2009ರಲ್ಲಿ ಸೂಚಿಸಿತ್ತು.</div><div> </div><div> ನಗರದಲ್ಲಿ 2,400 ಚದರ ಅಡಿ ಮತ್ತು ಅದಕ್ಕಿಂತ ಹೆಚ್ಚಿನ ಅಳತೆಯ 55 ಸಾವಿರ ಕಟ್ಟಡಗಳಿವೆ ಎಂದು ಜಲಮಂಡಳಿ ಗುರುತಿಸಿತ್ತು. 2011ರ ಡಿಸೆಂಬರ್ ತಿಂಗಳೊಳಗೆ ಈ ಎಲ್ಲ ಮನೆಗಳಲ್ಲಿ ಇದನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು 2009ರಲ್ಲಿ ಗಡುವು ವಿಧಿಸಲಾಗಿತ್ತು.</div><div> </div><div> ಬಳಿಕ ಅದನ್ನು 2012ರ ಮೇ ತಿಂಗಳ ವರೆಗೆ ವಿಸ್ತರಿಸಲಾಗಿತ್ತು. ಮಳೆ ನೀರು ವ್ಯವಸ್ಥೆ ಇಲ್ಲದ ಕಟ್ಟಡಗಳ ನೀರಿನ ಸಂಪರ್ಕ ಕಡಿತ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು. ಬಳಿಕ ಕಟ್ಟಡ ಮಾಲೀಕರ ಬಗ್ಗೆ ಮಂಡಳಿ ಮೃದು ಧೋರಣೆ ತಳೆದಿತ್ತು.</div><div> </div><div> 2016ರಲ್ಲಿ ಮಳೆ ನೀರು ಸಂಗ್ರಹ ವ್ಯವಸ್ಥೆಯ ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು. 2016ರ ಮೇ ತಿಂಗಳೊಳಗೆ ಮಳೆ ನೀರು ಸಂಗ್ರಹ ವ್ಯವಸ್ಥೆ ಹಾಕಿಕೊಳ್ಳಬೇಕು. ಇಲ್ಲದಿದ್ದರೆ ದಂಡ ವಿಧಿಸಲಾಗುತ್ತದೆ ಎಂದು ಜಲಮಂಡಳಿ ಮತ್ತೆ ಎಚ್ಚರಿಕೆ ನೀಡಿತ್ತು. ಬಳಿಕ ಆ ಗಡುವು ಅಕ್ಟೋಬರ್ವರೆಗೆ ವಿಸ್ತರಣೆಯಾಗಿತ್ತು. ಆ ಬಳಿಕ ದಂಡ ಹಾಕುವ ಪ್ರಕ್ರಿಯೆ ಆರಂಭಿಸಿ ಕಟ್ಟಡ ಮಾಲೀಕರಿಂದ ₹40 ಲಕ್ಷ ವಸೂಲಿ ಮಾಡಿದೆ. </div><div> </div><div> ಈ ವ್ಯವಸ್ಥೆ ಇಲ್ಲದ ಮನೆಗಳಿಗೆ ಪ್ರತಿ ತಿಂಗಳೂ ಬಿಲ್ಲಿನಲ್ಲಿ ನೀರು ಮತ್ತು ಒಳಚರಂಡಿ ಶುಲ್ಕದ ಶೇ 25 ರಷ್ಟು ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ. ಮೂರು ತಿಂಗಳ ಬಳಿಕವೂ ಅನುಷ್ಠಾನ ಮಾಡದೆ ಇದ್ದಲ್ಲಿ ಪ್ರತಿ ತಿಂಗಳೂ ಶೇ 50 ರಷ್ಟು ಹೆಚ್ಚಿನ ಶುಲ್ಕ ಹಾಕಲಾಗುತ್ತದೆ.</div><div> </div><div> ಗೃಹೇತರ ಕಟ್ಟಡಗಳಾದರೆ ಮೊದಲ ಮೂರು ತಿಂಗಳು ಶೇ 50 ರಷ್ಟು ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತಿದೆ. ಆನಂತರ ಅಳವಡಿಸಿಕೊಳ್ಳುವವರೆಗೆ ಶೇ 100 ರಷ್ಟು ಹೆಚ್ಚುವರಿ ಶುಲ್ಕ ತೆರಬೇಕಾಗುತ್ತದೆ.</div><div> </div><div> ‘ಮಳೆ ನೀರು ಸಂಗ್ರಹ ವ್ಯವಸ್ಥೆ ಬಗ್ಗೆ ಜನಜಾಗೃತಿ ಮೂಡಿಸಲು ಮಂಡಳಿ ಜಯನಗರ 5ನೇ ಹಂತದಲ್ಲಿ ₹5 ಕೋಟಿ ವೆಚ್ಚದಲ್ಲಿ ಸರ್.ಎಂ. ವಿಶ್ವೇಶ್ವರಯ್ಯ ಮಳೆ ನೀರು ಸಂಗ್ರಹ ಸುಗ್ಗಿ ಕೇಂದ್ರವನ್ನು ಆರಂಭಿಸಿದ್ದು, ಅಲ್ಲಿ ಪ್ರತಿ ತಿಂಗಳು ಸಾವಿರಾರು ಮಂದಿ ಮಾಹಿತಿ ಪಡೆಯುತ್ತಿದ್ದಾರೆ’ ಎಂದು ಮಂಡಳಿಯ ಪ್ರಧಾನ ಮುಖ್ಯ ಎಂಜಿನಿಯರ್ ಕೆಂಪರಾಮಯ್ಯ ತಿಳಿಸಿದರು.</div><div> </div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div> <strong>ಬೆಂಗಳೂರು:</strong> ಕೃಷ್ಣರಾಜಸಾಗರ (ಕೆಆರ್ಎಸ್) ಅಣೆಕಟ್ಟೆಯಲ್ಲಿ ಕಾವೇರಿ ಬತ್ತಿದರೆ ಬೆಂಗಳೂರು ಬಾಯಾರುತ್ತದೆ. ಪ್ರತಿವರ್ಷ ಬೇಸಿಗೆಯಲ್ಲಿ ನಗರದ ದಾಹ ತಣಿಸಲು ಜಲಮಂಡಳಿ ಹೆಣಗುತ್ತಿದೆ. <br /> <div> ಮಳೆಗಾಲದಲ್ಲಿ ಜಾಣತನದಿಂದ ನೀರು ಸಂಗ್ರಹಿಸಿದರೆ ಬೇಸಿಗೆಯನ್ನು ಸುಲಭವಾಗಿ ನಿಭಾಯಿಸಬಹುದು ಎಂಬುದು ಜಲತಜ್ಞರ ಪ್ರತಿಪಾದನೆ. ನಗರದಲ್ಲಿ ಮಳೆ ನೀರು ಸಂಗ್ರಹ ಕಡ್ಡಾಯ ಗೊಳಿಸಿದ್ದರೂ, ಅದಿನ್ನೂ ಪೂರ್ಣ ಪ್ರಮಾಣದಲ್ಲಿ ಜಾರಿಗೆ ಬಂದಿಲ್ಲ. ಈ ಬಗ್ಗೆ ಆಗೊಮ್ಮೆ ಈಗೊಮ್ಮೆ ಎಚ್ಚರಿಕೆ ನೀಡುವ ಜಲಮಂಡಳಿ ಬಳಿಕ ಮೌನಕ್ಕೆ ಶರಣಾಗುತ್ತಿದೆ. <br /> </div><div> ನಗರದಲ್ಲಿ ಮಳೆ ನೀರಿನ ಸಂಗ್ರಹ ಕುರಿತಂತೆ ಜಾಗೃತಿ ಮೂಡದ ಕಾರಣ ಪ್ರತಿವರ್ಷ 23 ಟಿಎಂಸಿ ಅಡಿಯಷ್ಟು ಪರಿಶುದ್ಧ ನೀರು ವ್ಯರ್ಥವಾಗಿ ಚರಂಡಿ ಪಾಲಾಗುತ್ತಿದೆ. ಅಷ್ಟು ನೀರನ್ನು ಸಾಗಿಸುವ ಸಾಮರ್ಥ್ಯ ಚರಂಡಿಗಳಿಗೆ ಇಲ್ಲ. ಹಾಗಾಗಿ ಪ್ರವಾಹವೂ ಉಂಟಾಗುತ್ತಿದೆ. <br /> </div><div> ಬೆಂಗಳೂರಿನಲ್ಲಿ ವರ್ಷದ 60 ಮಳೆ ದಿನಗಳಲ್ಲಿ ಸರಾಸರಿ 1 ಸಾವಿರ ಮಿಲಿ ಮೀಟರ್ ಮಳೆ ಆಗುತ್ತದೆ. 2,400 ಚದರ ಅಡಿ ಜಾಗದಲ್ಲಿ 2.06 ಲಕ್ಷ ಲೀಟರ್ ಮಳೆ ನೀರನ್ನು ಸಂಗ್ರಹಿಸಲು ಸಾಧ್ಯವಿದೆ ಎಂಬುದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆಎಸ್ಸಿಎಸ್ಟಿ) ಜಲತಜ್ಞ ಪ್ರೊ.ಎ.ಆರ್. ಶಿವಕುಮಾರ್ ಸಲಹೆ. </div><div> </div><div> ವ್ಯಕ್ತಿಯೊಬ್ಬ ದಿನಕ್ಕೆ 135 ಲೀಟರ್ ನೀರು ಉಪಯೋಗಿಸುತ್ತಾನೆ ಎಂದು ಪರಿಭಾವಿಸಿದರೆ, 4 ಜನರ ಒಂದು ಕುಟುಂಬ ವರ್ಷಕ್ಕೆ ಸರಾಸರಿ 2 ಲಕ್ಷ ಲೀಟರ್ನಷ್ಟು ನೀರನ್ನು ಬಳಸುತ್ತದೆ.</div><div> </div><div> ‘2,400 ಚದರ ಅಡಿ ಅಳತೆಯ ನಿವೇಶನದ ಮನೆಯಲ್ಲಿ ವಾಸಿಸುವ 4 ಜನರ ಸಾಧಾರಣ ಕುಟುಂಬವೊಂದಕ್ಕೆ ಬೇಕಾದಷ್ಟು ನೀರನ್ನು ಪ್ರಕೃತಿಯೇ ಧಾರಾಳವಾಗಿ ಕೊಡುತ್ತದೆ. ಸಂಗ್ರಹಿಸಿ, ಬಳಸುವ ಮನಸ್ಸು ನಮಗೆ ಬೇಕು ಅಷ್ಟೇ’ ಎಂದು ಅವರು ಹೇಳುತ್ತಾರೆ. <br /> </div><div> 19 ಲಕ್ಷ ಕಟ್ಟಡಗಳು ನಗರದಲ್ಲಿವೆ. ಮಳೆ ನೀರನ್ನು ಸಮರ್ಪಕವಾಗಿ ಸಂಗ್ರಹ ಮಾಡಿದರೆ ಇಲ್ಲಿನ ನಿವಾಸಿಗಳು ಜಲಮಂಡಳಿಯನ್ನು ಅವಲಂಬಿಸುವ ಅಗತ್ಯವೇ ಇರುವುದಿಲ್ಲ. ರಾಜಧಾನಿಯಲ್ಲಿ 29 ಸಾವಿರ ಕಟ್ಟಡಗಳಲ್ಲಿ ಮಾತ್ರ ಮಳೆ ನೀರು ಸಂಗ್ರಹ ವ್ಯವಸ್ಥೆ ಇದೆ ಎಂಬುದು ಜಲಮಂಡಳಿ ಸಮೀಕ್ಷೆಯಿಂದ ಕಂಡುಬಂದಿದೆ. </div><div> </div><div> ನೀರಿನ ಅಭಾವ ನೀಗಿಸಲು ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ಪ್ರತಿ ಮನೆ ಹಾಗೂ ಕಟ್ಟಡಗಳಲ್ಲಿ ಮಳೆ ನೀರು ಕಡ್ಡಾಯವಾಗಿ ಸಂಗ್ರಹಿಸಬೇಕು ಎಂದು ರಾಜ್ಯ ಸರ್ಕಾರ ಎಂಟು ವರ್ಷಗಳ ಹಿಂದೆ ಕಾನೂನು ರೂಪಿಸಿತ್ತು. </div><div> </div><div> 2,400 ಚದರ ಅಡಿಯ ನಿವೇಶನದ ಹಳೆಯ ಕಟ್ಟಡಗಳಿಗೆ ಹಾಗೂ ಹೊಸದಾಗಿ ನಿರ್ಮಿಸುವ 1,200 ಚದರ ಅಡಿಯ ಮತ್ತು ಅದಕ್ಕಿಂತ ಹೆಚ್ಚಿನ ವಿಸ್ತೀರ್ಣದ ಕಟ್ಟಡಗಳಲ್ಲಿ ಮಳೆ ನೀರು ವ್ಯವಸ್ಥೆಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಜಲಮಂಡಳಿ 2009ರಲ್ಲಿ ಸೂಚಿಸಿತ್ತು.</div><div> </div><div> ನಗರದಲ್ಲಿ 2,400 ಚದರ ಅಡಿ ಮತ್ತು ಅದಕ್ಕಿಂತ ಹೆಚ್ಚಿನ ಅಳತೆಯ 55 ಸಾವಿರ ಕಟ್ಟಡಗಳಿವೆ ಎಂದು ಜಲಮಂಡಳಿ ಗುರುತಿಸಿತ್ತು. 2011ರ ಡಿಸೆಂಬರ್ ತಿಂಗಳೊಳಗೆ ಈ ಎಲ್ಲ ಮನೆಗಳಲ್ಲಿ ಇದನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು 2009ರಲ್ಲಿ ಗಡುವು ವಿಧಿಸಲಾಗಿತ್ತು.</div><div> </div><div> ಬಳಿಕ ಅದನ್ನು 2012ರ ಮೇ ತಿಂಗಳ ವರೆಗೆ ವಿಸ್ತರಿಸಲಾಗಿತ್ತು. ಮಳೆ ನೀರು ವ್ಯವಸ್ಥೆ ಇಲ್ಲದ ಕಟ್ಟಡಗಳ ನೀರಿನ ಸಂಪರ್ಕ ಕಡಿತ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು. ಬಳಿಕ ಕಟ್ಟಡ ಮಾಲೀಕರ ಬಗ್ಗೆ ಮಂಡಳಿ ಮೃದು ಧೋರಣೆ ತಳೆದಿತ್ತು.</div><div> </div><div> 2016ರಲ್ಲಿ ಮಳೆ ನೀರು ಸಂಗ್ರಹ ವ್ಯವಸ್ಥೆಯ ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು. 2016ರ ಮೇ ತಿಂಗಳೊಳಗೆ ಮಳೆ ನೀರು ಸಂಗ್ರಹ ವ್ಯವಸ್ಥೆ ಹಾಕಿಕೊಳ್ಳಬೇಕು. ಇಲ್ಲದಿದ್ದರೆ ದಂಡ ವಿಧಿಸಲಾಗುತ್ತದೆ ಎಂದು ಜಲಮಂಡಳಿ ಮತ್ತೆ ಎಚ್ಚರಿಕೆ ನೀಡಿತ್ತು. ಬಳಿಕ ಆ ಗಡುವು ಅಕ್ಟೋಬರ್ವರೆಗೆ ವಿಸ್ತರಣೆಯಾಗಿತ್ತು. ಆ ಬಳಿಕ ದಂಡ ಹಾಕುವ ಪ್ರಕ್ರಿಯೆ ಆರಂಭಿಸಿ ಕಟ್ಟಡ ಮಾಲೀಕರಿಂದ ₹40 ಲಕ್ಷ ವಸೂಲಿ ಮಾಡಿದೆ. </div><div> </div><div> ಈ ವ್ಯವಸ್ಥೆ ಇಲ್ಲದ ಮನೆಗಳಿಗೆ ಪ್ರತಿ ತಿಂಗಳೂ ಬಿಲ್ಲಿನಲ್ಲಿ ನೀರು ಮತ್ತು ಒಳಚರಂಡಿ ಶುಲ್ಕದ ಶೇ 25 ರಷ್ಟು ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ. ಮೂರು ತಿಂಗಳ ಬಳಿಕವೂ ಅನುಷ್ಠಾನ ಮಾಡದೆ ಇದ್ದಲ್ಲಿ ಪ್ರತಿ ತಿಂಗಳೂ ಶೇ 50 ರಷ್ಟು ಹೆಚ್ಚಿನ ಶುಲ್ಕ ಹಾಕಲಾಗುತ್ತದೆ.</div><div> </div><div> ಗೃಹೇತರ ಕಟ್ಟಡಗಳಾದರೆ ಮೊದಲ ಮೂರು ತಿಂಗಳು ಶೇ 50 ರಷ್ಟು ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತಿದೆ. ಆನಂತರ ಅಳವಡಿಸಿಕೊಳ್ಳುವವರೆಗೆ ಶೇ 100 ರಷ್ಟು ಹೆಚ್ಚುವರಿ ಶುಲ್ಕ ತೆರಬೇಕಾಗುತ್ತದೆ.</div><div> </div><div> ‘ಮಳೆ ನೀರು ಸಂಗ್ರಹ ವ್ಯವಸ್ಥೆ ಬಗ್ಗೆ ಜನಜಾಗೃತಿ ಮೂಡಿಸಲು ಮಂಡಳಿ ಜಯನಗರ 5ನೇ ಹಂತದಲ್ಲಿ ₹5 ಕೋಟಿ ವೆಚ್ಚದಲ್ಲಿ ಸರ್.ಎಂ. ವಿಶ್ವೇಶ್ವರಯ್ಯ ಮಳೆ ನೀರು ಸಂಗ್ರಹ ಸುಗ್ಗಿ ಕೇಂದ್ರವನ್ನು ಆರಂಭಿಸಿದ್ದು, ಅಲ್ಲಿ ಪ್ರತಿ ತಿಂಗಳು ಸಾವಿರಾರು ಮಂದಿ ಮಾಹಿತಿ ಪಡೆಯುತ್ತಿದ್ದಾರೆ’ ಎಂದು ಮಂಡಳಿಯ ಪ್ರಧಾನ ಮುಖ್ಯ ಎಂಜಿನಿಯರ್ ಕೆಂಪರಾಮಯ್ಯ ತಿಳಿಸಿದರು.</div><div> </div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>