ಮಾಗಡಿ: ಅವಸರವೇ ಅಪಘಾತಕ್ಕೆ ಕಾರಣ ಎಂಬುದನ್ನು ವಾಹನ ಚಾಲಕರು ಗಮನಿಸಬೇಕು. ಮಾಗಡಿ–ಬೆಂಗಳೂರು ರಸ್ತೆಯಲ್ಲಿ ಚಲಿಸುವ ವಾಹನ ಸವಾರರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು. ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಬ್ ಇನ್ಸ್ಪೆಕ್ಟರ್ ಮಂಜುನಾಥ್.ಡಿ.ಆರ್. ತಿಳಿಸಿದರು.
ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಹೊಸಪೇಟೆ ಸರ್ಕಾರಿ ಶಾಲೆಯ ಬಳಿ ಬಿ.ಕೆ.ರಸ್ತೆಯಲ್ಲಿ ಶಾಲಾ ವಲಯ ಸೂಚನಾ ಫಲಕ ಅಳವಡಿಸಿ ಅವರು ಮಾತನಾಡಿದರು.
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಜನಸ್ನೇಹಿ ಪೊಲೀಸ್ ವ್ಯವಸ್ಥೆ ಜಾರಿಯಲ್ಲಿದೆ. ಅಪರಾಧದ ಕೃತ್ಯಗಳು ಕಂಡುಬಂದಲ್ಲಿ ತಕ್ಷಣ ಠಾಣೆಗೆ ತಿಳಿಸಬಹುದು. ಅವರ ಹೆಸರನ್ನು ಬಹಿರಂಗ ಪಡಿಸು ವುದಿಲ್ಲ ಎಂದು ಅವರು ಹೇಳಿದರು.
‘ಹೊಸಪೇಟೆ ವೃತ್ತದಲ್ಲಿ ನಾಲ್ಕು ರಸ್ತೆಗಳಲ್ಲೂ ರಸ್ತೆ ಉಬ್ಬು ನಿರ್ಮಿಸುವಂತೆ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆದಿದ್ದೇವೆ. ಹೊಸಪೇಟೆ ರಸ್ತೆಯ ಬಳಿ ಬೇಕರಿ, ಅಂಗಡಿಗಳ ಮುಂದೆ ವಾಹನ ನಿಲ್ಲಿಸಬಾರದು, ರಸ್ತೆ ಬದಿ ತರಕಾರಿ ಮಾರುವವರು ರಸ್ತೆಯಿಂದ 5 ಅಡಿ ದೂರದಲ್ಲಿ ಕುಳಿತುಕೊಳ್ಳಬೇಕು.